ಬೆಂಗಳೂರು/ಉಡುಪಿ: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದೆ. ಸಮವಸ್ತ್ರ ಧರಿಸಿ ಬಂದವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸರ್ಕಾರ ಈ ಹಿಂದೆಯೇ ಹೇಳಿದೆ. ಹೀಗಿದ್ದರೂ ಕೆಲವೆಡೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದು, ಮನವೊಲಿಕೆಯ ಬಳಿಕ ಕೆಲವರು ಹಿಜಾಬ್ ಕಳಚಿಟ್ಟು ಪರೀಕ್ಷೆ ಎದುರಿಸಿದರೆ, ಇಬ್ಬರು ವಿದ್ಯಾರ್ಥಿನಿಯರು ಕಾಲೇಜು ಆವರಣದಿಂದ ಹೊರ ನಡೆದ ಘಟನೆ ವರದಿಯಾಗಿದೆ.
ಹಿಜಾಬ್ಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರು ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಹಾಗೂ ರೇಶಂ ಪರೀಕ್ಷೆ ಬರೆಯದೇ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ. ಒಂದು ಕೋರ್ಟ್ ಆದೇಶ ಹಾಗೂ ಇನ್ನೊಂದೆಡೆ ಸರ್ಕಾರದ ಸೂಚನೆ ಇದ್ದರೂ ವಿದ್ಯಾರ್ಥಿನಿಯರು ಮಾತ್ರ ಮೊಂಡುತನವನ್ನು ಪ್ರದರ್ಶನ ಮಾಡಿದ್ದಾರೆ.
ಹಿಜಾಬ್ ಧರಿಸಿ ಬಂದವರಿಗೆ ಅದನ್ನು ತೆಗೆದಿಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಪರೀಕ್ಷೆ ಬರೆದ ಬಳಿಕ ಮತ್ತೆ ಹಿಜಾಬ್ ಧರಿಸಿ ಹೋಗಬಹುದು. ಆದರೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂಬ ಹಠಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಅವಕಾಶ ನೀಡದಿದ್ದಕ್ಕೆ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ. ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)
ಪ್ರಶಾಂತ್ ನೀಲ್ ತಪ್ಪು ಮಾಡಿದ್ರಾ? KGF-2 ಯಶಸ್ಸಿನ ನಡುವೆಯೇ ಚಿತ್ರತಂಡಕ್ಕೆ ಎದುರಾಯ್ತು ಹೊಸ ಸಂಕಷ್ಟ!
21ನೇ ವಯಸ್ಸಿಗೆ ಅಮೇಜಾನ್ ಲಂಡನ್ನಲ್ಲಿ ಕೆಲಸ ಗಿಟ್ಟಿಸಿದ ಕುವರಿ: ಸಂಬಳ ಕೇಳಿದ್ರೆ ಹುಬ್ಬೇರೋದು ಖಂಡಿತ!
ಬಗೆದಷ್ಟು ಹೊರ ಬರ್ತಿದೆ PSI ಪರೀಕ್ಷಾ ಅಕ್ರಮ: ಮುನ್ನಾಭಾಯಿ MBBS ಸ್ಟೈಲ್ನಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು