ಹೈದರಾಬಾದ್: ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾರಿ ಹೋಗಿ ಬಿದ್ದ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಂದೂರ್ ಮಂಡಲದ ಬೊಡಂಗಿಪಾರ್ಥಿ ಗ್ರಾಮದಲ್ಲಿ ನಡೆದಿದೆ.
ಅಪಘಾತದ ದೃಶ್ಯ ಸಿಸಿಟಿಯಲ್ಲಿ ದಾಖಲಾಗಿದೆ. ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತಿರುವಿನಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಅದೇ ಪೊಲೀಸ್ ವಾಹನದಲ್ಲಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಪ್ರಾಣಕ್ಕೇನು ಅಪಾಯವಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ರಾಮ ರಾಜೇಶ್ವರಿ ಮಾತನಾಡಿದ್ದು, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. (ಏಜೆನ್ಸೀಸ್)
(ವಿಡಿಯೋ ಕೃಪೆ: ನ್ಯೂಸ್ ಮೀಟರ್)
— NewsMeter (@NewsMeter_In) August 19, 2022
ಪ್ರಿಯಕರನನ್ನು ನಂಬಿ ಸರ್ವಸ್ವವನ್ನು ಅರ್ಪಿಸಿದ ಪ್ರೇಯಸಿ: ಗರ್ಭಪಾತ ಮಾಡಿಸಿಕೊಳ್ಳುವಾಗ ನಡೆಯಿತು ದುರಂತ
ಶಬರಿಮಲೆಗೆ ಭೇಟಿ ನೀಡಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ಕಲ್ಲು, ಇಟ್ಟಿಗೆಗಳಿಂದ ದಾಳಿ ಮಾಡಿದ ಯುವಕ!