ನಾನು ಮಹಿಳೆಯರನ್ನ ಮಂಚಕ್ಕೆ ಕರಿತೀನಿ.. ನೇರವಾಗೇ ಕೇಳ್ತೀನಿ, ಒಪ್ಪದಿದ್ರೆ… ನಾಲಿಗೆ ಹರಿಬಿಟ್ಟ ಖ್ಯಾತ ನಟ

blank

ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಲೈಂಗಿಕ ಸಂಬಂಧದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಚಳುವಳಿಯನ್ನು ನಾನು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರನ್ನು ದೈಹಿಕ ಸಂಬಂಧದ ಬಗ್ಗೆ ಕೇಳುವುದೇ ಎಂದು ಹೇಳುವ ಮೂಲಕ ಮಹಿಳೆಯರ ಕೆಂಗಣ್ಣಿಗೆ ವಿನಾಯಕನ್​ ಗುರಿಯಾಗಿದ್ದಾರೆ.

ಅಂದಹಾಗೆ ತಮಿಳಿನಲ್ಲಿ ‘ತಿಮಿರು’, ‘ಸಿರುತೈ’, ‘ಮರಿಯಾನ್’ ಮುಂತಾದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುವಲ್ಲಿ ವಿನಾಯಕನ್​ ಹೆಸರುವಾಸಿಯಾಗಿದ್ದಾರೆ. ಅಲ್ಲದೆ, ತಮ್ಮ ತವರು ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ ಜೊತೆಗೆ ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಸಹ ಗೆದ್ದಿದ್ದಾರೆ.

ನಾನು ಮಹಿಳೆಯರನ್ನ ಮಂಚಕ್ಕೆ ಕರಿತೀನಿ.. ನೇರವಾಗೇ ಕೇಳ್ತೀನಿ, ಒಪ್ಪದಿದ್ರೆ... ನಾಲಿಗೆ ಹರಿಬಿಟ್ಟ ಖ್ಯಾತ ನಟ

ನಟಿ ನವ್ಯಾ ನಾಯರ್​ ಮತ್ತೆ ಮಲಯಾಳಂ ಚಿತ್ರಕ್ಕೆ ಕಂಬ್ಯಾಕ್​ ಮಾಡುತ್ತಿರುವ ವಿ.ಕೆ. ಪ್ರಕಾಶ್​ ನಿರ್ದೇಶನದ “ಒರುಥಿ” ಚಿತ್ರದ ಪ್ರಚಾರದ ವೇಳೆ ವಿವಾದವನ್ನು ಸೃಷ್ಟಿ ಮಾಡಿದ್ದಾರೆ. ನಾನು 10 ಮಹಿಳೆಯರ ಜತೆ ಲೈಂಗಿಕ ಸಂಬಂಧವನ್ನು ಹೊಂದಿದ್ದೇನೆ. ನನ್ನೊಂದಿಗೆ ಮಲಗುತ್ತೀರಾ ಎಂದು ನಾನು ನೇರವಾಗಿಯೇ ಕೇಳುತ್ತೇನೆ. ಓಕೆ ಅಂದರೆ ಓಕೆ. ಒಂದು ವೇಳೆ ನಿರಾಕರಿಸಿದರೆ, ನಾನದನ್ನು ಅಲ್ಲಿಗೆ ಬಿಟ್ಟು ಬಿಡುತ್ತೇನೆ. ಬಲವಂತ ಮಾಡುವುದಿಲ್ಲ. ಮಹಿಳೆಗೆ ಲೈಂಗಿಕತೆ ಕೇಳುವುದು “ಮೀ ಟೂ” ಎಂದಾದರೆ, ನಾನದನ್ನು ಮುಂದುವರಿಸುತ್ತೇನೆ ಎಂದು ಹೇಳುವ ಮೂಲಕ ತಮ್ಮ ಮಾತನ್ನು ಮುಗಿಸಿದರು.

ವಿನಾಯಕನ್​ ಹೇಳಿದ ಮಾತು ಇದೀಗ ಮಲಯಾಳಂ ಇಂಡಸ್ಟ್ರಿಯ ಅನೇಕ ಸೆಲೆಬ್ರಿಟಿಗಳ ಕೋಪಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಯನ್ನು ನೀಡುವಾಗ ನಟಿ ನವ್ಯಾ ನಾಯರ್​ ಕೂಡ ವೇದಿಕೆ ಮೇಲೆಯೇ ಇದ್ದರು. ಈ ವೇಳೆ ಅವರು ವಿನಾಯಕನ್​ ಅವರ ಮಾತನ್ನು ಖಂಡಿಸದೇ ಮೌನ ವಹಿಸಿದ್ದಕ್ಕೆ ಟೀಕೆಗೆ ಗುರಿಯಾದರು. ಆ ಕ್ಷಣದಲ್ಲಿ ನಾನೇನು ಮಾಡಲು ಸಾಧ್ಯವಾಗಲಿಲ್ಲ ಎಂದು ಸಮರ್ಥಿಸಿಕೊಂಡರು ಆದರೆ, ನಂತರದಲ್ಲಿ ಹೇಳಿಕೆಯನ್ನು ಖಂಡಿಸಿದರು.

ನಾನು ಮಹಿಳೆಯರನ್ನ ಮಂಚಕ್ಕೆ ಕರಿತೀನಿ.. ನೇರವಾಗೇ ಕೇಳ್ತೀನಿ, ಒಪ್ಪದಿದ್ರೆ... ನಾಲಿಗೆ ಹರಿಬಿಟ್ಟ ಖ್ಯಾತ ನಟ

ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ಮತ್ತು ಐಶ್ವರ್ಯಾ ರಾಜೇಶ್, ಸಿಮ್ರಾನ್ ಮತ್ತು ರಿತು ವರ್ಮಾ ನಟಿಸಿರುವ ವಿಕ್ರಮ್ ಅವರ ಮುಂಬರುವ ಚಿತ್ರ ‘ಧ್ರುವ ನಚ್ಚತಿರಂ’ ನಲ್ಲಿ ವಿನಾಯಕನ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. (ಏಜೆನ್ಸೀಸ್​)

ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್​ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ

ಒಂದು ಸಣ್ಣ ಎಡವಟ್ಟಿಗೆ ತಾನು ಪ್ರಾಣ ಕಳೆದುಕೊಂಡಿದ್ದಲ್ಲದೆ 100 ಕೋಟಿ ರೂ. ನಷ್ಟ ಮಾಡಿದ ಬೆಕ್ಕು!

ಯೂಕ್ರೇನ್​ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಕೊನೆ ಎಂದು? ಹೊರಬಿತ್ತು ಸ್ಫೋಟಕ ಮಾಹಿತಿ!

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…