ಮೈಸೂರು: ಇನ್ಮುಂದೆ ಯಾವುದೇ ಸಮಿತಿ, ಶಾಸಕರೊಂದಿಗೆ ಅಗೌರವದಿಂದ ನಡೆದುಕೊಳ್ಳುವುದಿಲ್ಲ. ಸರ್ಕಾರದ ಶಿಷ್ಟಾಚಾರವನ್ನು ಪರಿಪಾಲನೆ ಮಾಡುತ್ತೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
2021ರ ಜನವರಿ 12ರಂದು ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಕಾಗದ ಪತ್ರ ಸಮಿತಿ ಸಭೆ ನಡೆದಿತ್ತು, ಈ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಅವರು ಅಗೌರವವಾಗಿ ನಡೆದುಕೊಂಡಿದ್ದಕ್ಕೆ ಅವರ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಸಾರಾ ಮಹೇಶ್ ಹಕ್ಕುಚ್ಯುತಿ ಮಂಡಿಸಿದ್ದರು. ಇದೀಗ ಹಕ್ಕುಭಾದ್ಯತೆಗಳ ಸಮಿತಿ ಮುಂದೆ ಮಾತನಾಡಿರುವ ರೋಹಿಣಿ ಸಿಂಧೂರಿ, ಇನ್ಮುಂದೆ ಯಾವುದೇ ಸಮಿತಿ, ಶಾಸಕರೊಂದಿಗೆ ಅಗೌರವದಿಂದ ನಡೆದುಕೊಳ್ಳುವುದಿಲ್ಲ. ಸರ್ಕಾರದ ಶಿಷ್ಟಾಚಾರವನ್ನು ಪರಿಪಾಲನೆ ಮಾಡುತ್ತೇನೆ ಎಂದಿದ್ದಾರೆ.
ಸಮಿತಿಯ ವರದಿ ದಿಗ್ವಿಜಯ ನ್ಯೂಸ್ಗೆ ಲಭ್ಯವಾಗಿದೆ. ಕಾಗದ ಪತ್ರ ಸಮಿತಿ ನಡೆಸಿದ್ದ ಮುಡಾ ಸಭೆ, ಶ್ರೀರಾಮ ಸಕ್ಕರೆ ಕಾರ್ಖಾನೆಯ ಸಭೆಗೂ ಸಿಂಧೂರಿ ಗೈರಾಗಿದ್ದರು. ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿರುವ ಸಾ.ರಾ.ಮಹೇಶ್ ಈ ಬಗ್ಗೆಯೂ ಹಕ್ಕುಚ್ಯುತಿ ಮಂಡಿಸಿದ್ದರು. (ದಿಗ್ವಿಜಯ ನ್ಯೂಸ್)
ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಎಫ್ಡಿಎ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ
ಶೂಟಿಂಗ್ ಸೆಟ್ನಲ್ಲಿ ಗಳಗಳನೇ ಅತ್ತ ಸಮಂತಾ! ಸ್ಯಾಮ್ ಕಣ್ಣೀರು ನೋಡಿ ಚಿತ್ರತಂಡ ಹೇಳಿದ್ದು ಹೀಗೆ…
ಸಮಂತಾರ ಈ ಫೋಟೋ ಬಳಸಿದವರಿಗೆ ಸಂಕಷ್ಟ: ನಟಿಯ ನಿರ್ಧಾರದಿಂದ ಕೆಲವರಿಗೆ ಸಮಸ್ಯೆ ಖಂಡಿತ
ದಕ್ಷಿಣದತ್ತ ಜಾಕ್ಲೀನ್ ಫರ್ನಾಂಡೀಸ್; ಎರಡು ತೆಲುಗು ಚಿತ್ರಗಳಲ್ಲಿ ನಟನೆ