ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ

ಬಾಗಲಕೋಟೆ: ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜ ಸೇವೆಯ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು (ಫೆ.05) ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ರಬಕವಿ-ಬನಹಟ್ಟಿ ತಾಲೂಕಿನ ಮಹಲಿಂಗಪುರದಲ್ಲಿನ ತಮ್ಮ ಭಾವೈಕ್ಯ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 82 ವರ್ಷದ ಇಬ್ರಾಹಿಂ ಸುತಾರ ಸಾವನ್ನಪ್ಪಿದ್ದರಿಂದ ಭಾವೈಕ್ಯತೆಯ ಕೊಂಡಿ ಕಳಚಿ ಬಿದ್ದಂತಾಗಿದೆ. ಪ್ರತಿವರ್ಷ ನೂರಾರು ಕಾರ್ಯಕ್ರಮಗಳನ್ನ ನೀಡುತ್ತ, ಹಿಂದು-ಮುಸ್ಲಿಂರಲ್ಲಿ ಭಾವೈಕ್ಯತೆ ಬೆಸೆಯುವ ಕಾಯಕದಲ್ಲಿ ತೊಡಗಿದ್ದ ಇಬ್ರಾಹಿಂ ಸುತಾರ ಇಹಲೋಕ‌ ತೊರೆದಿದ್ದು … Continue reading ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ