More

    ಈ ಸಮಾಜ ಮಹಿಳೆಯರನ್ನು ಮಾತ್ರ ಪ್ರಶ್ನಿಸುತ್ತದೆ, ಪುರುಷರನ್ನೇಕೆ ಪ್ರಶ್ನಿಸುವುದಿಲ್ಲ: ಸಮಂತಾ ಪೋಸ್ಟ್​ ವೈರಲ್​

    ಹೈದರಾಬಾದ್​: ಟಾಲಿವುಡ್​ ತಾರಾದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆಯುವುದರೊಂದಿಗೆ ತಮ್ಮ ವೈವಾಹಿಕ ಜೀವನಕ್ಕೆ ಪೂರ್ಣ ವಿರಾಮ ಹಾಕಿದ್ದಾರೆ. ಡಿವೋರ್ಸ್​ ಸುದ್ದಿ ಬಂದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಸಮಂತಾರನ್ನೇ ಹೆಚ್ಚು ಕೇಂದ್ರೀಕರಿಸಿ ಅನೇಕ ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಬೇಸರಗೊಂಡಿರುವ ಸಮಂತಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ನೋವಿನಿಂದ ಬರೆದುಕೊಂಡಿದ್ದಾರೆ.

    ಒಂದೆಡೆ ನಾಗಚೈತನ್ಯ ಡಿವೋರ್ಸ್​ ವಿಚಾರವಾಗಿ ಆರಂಭದಿಂದಲೂ ತುಟಿ ಬಿಚ್ಚದ್ದೇ ಮೌನವಾಗಿದ್ದಾರೆ. ಸಾಮಾಜಿಕ ಜಾಲತಾಣದಿಂದಲೂ ದೂರವಾಗಿದ್ದಾರೆ. ಇತ್ತ ಸಮಂತಾ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿದ್ದು ತಮ್ಮ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡುತ್ತಿದ್ದಾರೆ.

    ಇದೀಗ ತಮ್ಮ ಇನ್​ಸ್ಟಾಗ್ರಾಂ ಬರೆದುಕೊಂಡಿರುವ ಸಮಂತಾ, ಈ ಸಮಾಜ ಮಹಿಳೆಯರನ್ನು ಮಾತ್ರ ಪ್ರಶ್ನಿಸುತ್ತದೆ. ಪುರುಷರನ್ನೇಕೆ ಪ್ರಶ್ನಿಸುವುದಿಲ್ಲ. ಮಹಿಳೆಯರನ್ನು ನೈತಿಕವಾಗಿ ಪ್ರಶ್ನಿಸಿ, ಪುರುಷರನ್ನು ಪ್ರಶ್ನಿಸದಿದ್ದರೆ, ನಾವು, ಒಂದು ಸಮಾಜವಾಗಿ, ಮೂಲಭೂತವಾಗಿ ಯಾವುದೇ ನೈತಿಕತೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

    ಡಿವೋರ್ಸ್​ ವಿಚಾರವಾಗಿ ಹೆಚ್ಚಾಗಿ ಸಮಂತಾರನ್ನೇ ಪ್ರಶ್ನಿಸುತ್ತಿರುವುದರಿಂದ ಸ್ಯಾಮ್​ ಈ ಪೋಸ್ಟ್ ಅನ್ನು ಪೋಸ್ಟ್ ಮಾಡಿರಬಹುದೆಂಬ ಚರ್ಚೆ ಜಾಲತಾಣದಲ್ಲಿ ಜೋರಾಗಿದೆ.

    ಈ ಸಮಾಜ ಮಹಿಳೆಯರನ್ನು ಮಾತ್ರ ಪ್ರಶ್ನಿಸುತ್ತದೆ, ಪುರುಷರನ್ನೇಕೆ ಪ್ರಶ್ನಿಸುವುದಿಲ್ಲ: ಸಮಂತಾ ಪೋಸ್ಟ್​ ವೈರಲ್​

    ಅ.2ರಂದು ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡುವ ಮೂಲಕ ಡಿವೋರ್ಸ್​ ಅನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. “ಸಾಕಷ್ಟು ಸಮಾಲೋಚನೆಯ ಬಳಿಕವು ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಬೇರೆ ಬೇರೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ” ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ. ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್​ ಆನ್​ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

    ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ವಿಘ್ನೇಶ್ ಶಿವನ್ ನಿರ್ದೇಶನದ ಮತ್ತು ವಿಘ್ನೇಶ್ ಶಿವನ್ ರೌಡಿ ಪಿಕ್ಚರ್ಸ್ ಸಹಯೋಗದೊಂದಿಗೆ ಸೆವೆನ್ ಸ್ಕ್ರೀನ್ ಸ್ಟುಡಿಯೋದಿಂದ ಬಂಡವಾಳ ಹೂಡುತ್ತಿರುವ ತಮಿಳು ಸಿನಿಮಾ ಕಾತು ವಾಕುಲಾ ರಂಡು ಕಾದಲ್​ ನಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಜೊತೆ ಸಮಂತಾ ನಟಿಸುತ್ತಿದ್ದಾರೆ. ಇದರೊಂದಿಗೆ ಗುಣಶೇಖರ್ ನಿರ್ದೇಶನದ ಶಾಕುಂತಲಂ ಸಿನಿಮಾದಲ್ಲಿ ಶಾಕುಂತಲೆಯಾಗಿ ಸಮಂತಾ ಬಣ್ಣ ಹಚ್ಚಿದ್ದು, ಶಾಕುಂತಲಂ ಚಿತ್ರದ ಚಿತ್ರೀಕರಣವನ್ನು ಸಮಂತಾ ಸಂಪೂರ್ಣ ಮುಗಿಸಿದ್ದಾರೆ. (ಏಜೆನ್ಸೀಸ್​​)

    ಶೂಟಿಂಗ್​ ಸೆಟ್​ನಲ್ಲಿ ಗಳಗಳನೇ ಅತ್ತ ಸಮಂತಾ! ಸ್ಯಾಮ್​ ಕಣ್ಣೀರು ನೋಡಿ ಚಿತ್ರತಂಡ ಹೇಳಿದ್ದು ಹೀಗೆ…

    ಸಮಂತಾರ ಈ ಫೋಟೋ ಬಳಸಿದವರಿಗೆ ಸಂಕಷ್ಟ: ನಟಿಯ ನಿರ್ಧಾರದಿಂದ ಕೆಲವರಿಗೆ ಸಮಸ್ಯೆ ಖಂಡಿತ​

    ಬರಲಿದೆ ಕಬ್ಜ ಪಾರ್ಟ್ 2!; ಎರಡನೇ ಭಾಗದ ಕಥೆ ಕೂಡ ಸಿದ್ಧ

    ಇದು ಮೊದಲೇನಲ್ಲ…; ಸ್ಟಾರ್ ಮಕ್ಕಳ ನಶೆಯ ಕಥೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts