ನವದೆಹಲಿ: 2019ರ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು)ದ ವಿದ್ಯಾರ್ಥಿ ಶಾರ್ಜಿಲ್ ಇಮಾಮ್ಗೆ ದೆಹಲಿ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಶಾರ್ಜಿಲ್ ನೀಡಿದ ಪ್ರಚೋದನಕಾರಿ ಭಾಷಣವೇ 2019 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಜಾಮಿಯಾ ನಗರ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣ ಎಂಬ ಆರೋಪದಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಲಾಗಿತ್ತು.
ಇದೀಗ ಶಾರ್ಜಿಲ್ ಜಾಮೀನು ದೊರೆತಿದ್ದರೂ, ಅವರ ವಿರುದ್ಧ ಬಾಕಿ ಉಳಿದಿರುವ ಇತರ ಪ್ರಕರಣಗಳಲ್ಲಿ ಜಾಮೀನು ಪಡೆಯದ ಕಾರಣ ಬಂಧನದಲ್ಲಿಯೇ ಮುಂದುವರಿಯಲಿದ್ದಾರೆ. ಸದ್ಯ ಎನ್ಎಫ್ಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ದೆಹಲಿಯ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಅನುಜ್ ಅಗರ್ವಾಲ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಎಫ್ಐಆರ್ ದಾಖಲಾದ ಬಳಿಕ 31 ತಿಂಗಳ ಕಾಲ ಕಸ್ಟಡಿಯಲ್ಲಿ ಉಳಿದಿರುವ ಕಾರಣಕ್ಕಾಗಿ ಸೆಕ್ಷನ್ 436-ಎ ಸಿಆರ್ಪಿಸಿ ಅಡಿಯಲ್ಲಿ ಪರಿಹಾರ ಕೋರಿ ಇಮಾಮ್ ಅರ್ಜಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸುವಂತೆ ದೆಹಲಿ ಹೈಕೋರ್ಟ್ ವಿಚಾರಣಾ ನ್ಯಾಯಾಲಯವನ್ನು ಕೇಳಿದ ನಂತರ ಈ ಬೆಳವಣಿಗೆ ನಡೆದಿದೆ.
2019ರ ಡಿಸೆಂಬರ್ 15ರಂದು ಜಾಮಿಯಾ ನಗರದ ವಿದ್ಯಾರ್ಥಿಗಳು ಮತ್ತು ನಿವಾಸಿಗಳು ಪೌರತ್ವ ತಿದ್ದುಪಡಿ ಮಸೂದೆಯ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ಗುಂಪೊಂದು ಕಲ್ಲು, ಇಟ್ಟಿಗೆ, ದೊಣ್ಣೆಗಳಿಂದ ಸಾರ್ವಜನಿಕ ಮತ್ತು ಖಾಸಗಿ ವಾಹನಗಳು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿತ್ತು. ಅದೇ ವರ್ಷ ಡಿಸೆಂಬರ್ 13 ರಂದು ಶಾರ್ಜಿಲ್ ಇಮಾಮ್ ಮಾಡಿದ ಭಾಷಣದಿಂದ ಗಲಭೆಕೋರರು ಪ್ರಚೋದಿಸಲ್ಪಟ್ಟರು ಮತ್ತು ನಂತರ ಹಿಂಸಾಚಾರ ನಡೆಯಿತು ಎಂಬ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. (ಏಜೆನ್ಸೀಸ್)
ಬಿಬಿಎಂಪಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್: ಹೈಕೋರ್ಟ್ ನೀಡಿದೆ ಈ ಗಡುವು….
ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಶುರು: ಸಿದ್ದು- ಡಿಕೆಶಿ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್ ಗಾಂಧಿ
VIDEO: ಮಾತಿನ ಭರದಲ್ಲಿ ಪ್ರಧಾನಿ ಮೋದಿಗೇ ಸವಾಲ್ ಹಾಕಿದ ಬಿಜೆಪಿ ನಾಯಕಿ! ರಾಜಕೀಯ ಸಂಚಲನ