ನವದೆಹಲಿ: ಮಹಾಮಾರಿ ಕರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಜೆಯಲ್ಲಿರುವ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಥವಾ ಏಮ್ಸ್ ಸಿಬ್ಬಂದಿ ತಕ್ಷಣ ಕೆಲಸಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ.
ಏಮ್ಸ್ ಸಿಬ್ಬಂದಿಗೆ ಚಳಿಗಾಲದ ರಜೆ ಸೌಲಭ್ಯವನ್ನು ರದ್ದುಪಡಿಸಲಾಗಿದೆ. ಸದ್ಯ ಕಳೆದ ಮೂರು ದಿನಗಳಿಂದ ಏಮ್ಸ್ಗೆ 50ಕ್ಕೂ ಹೆಚ್ಚು ಕರೊನಾ ರೋಗಿಗಳು ದಾಖಲಾಗಿದ್ದು, ಇದು ಒಳ್ಳೆಯ ಸಂಕೇತವಲ್ಲ. ದೇಶವೂ ಮೂರನೇ ಅಲೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು. ಒಮಿಕ್ರಾನ್ ಜತೆಯಲ್ಲಿ ಡೆಲ್ಟಾ ರೂಪಾಂತರಿ ಕೂಡ ಹರಡುತ್ತಿದ್ದು, ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಏಮ್ಸ್ನ ಉನ್ನತ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಜೆಯಲ್ಲಿರುವ ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಏಮ್ಸ್ ಸೂಚನೆ ನೀಡಿದೆ. ಇತ್ತ ದೆಹಲಿ ಸರ್ಕಾರ ಕರೊನಾ ಹೆಚ್ಚಳ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಿದೆ. ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿದೆ. ಖಾಸಗಿ ಕಂಪನಿಗಳಿಗೆ ಶೇ. 50 ರಷ್ಟು ಉದ್ಯೋಗಿಗಳಿಗೆ ಅನುಮತಿ ನೀಡಲಾಗಿದೆ.
ದೆಹಲಿಯಲ್ಲಿ ಸೋಮವಾರ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಮತ್ತು ಪಾಸಿಟಿವ್ ದರ ಶೇ. 6.46 ಕ್ಕೆ ಏರಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕರೊನಾ ಪಾಸಿಟಿವ್ ಆಗಿದ್ದು, ರೋಗ ಲಕ್ಷಣಗಳು ಲಘುವಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಮ ತೆಗೆದುಕೊಳ್ಳುವ ಲಕ್ಷಣಗಳು ಕಾಣುತ್ತಿವೆ. (ಏಜೆನ್ಸೀಸ್)
ಗ್ರಾಮೀಣ ಭಾಗದ ಪತ್ರಕರ್ತರಿಗೆ ಹೆಲ್ತ್ ಕಾರ್ಡ್, ಬಸ್ ಪಾಸ್ ಸೌಲಭ್ಯ: ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭರವಸೆ
ನೀನೇನ್ ದೊಡ್ಡ ಡಾನಾ? ನಾನಾ-ನೀನಾ ನೋಡೇ ಬಿಡೋಣ್ವಾ? ರಾಜ್ ಬಿ ಶೆಟ್ಟಿಗೆ ಚಮಕ್ ಕೊಟ್ಟ ಶಿವಣ್ಣ
ಇದು ಆರ್ಆರ್ಆರ್ ಚಿತ್ರದ ಅತ್ಯಂತ ಕಳಪೆ ಸಾಧನೆಯಂತೆ! ಜಕ್ಕಣನ ಮೇಲೆ ಅಸಮಾಧಾನ