More

    ನಾಗಸಮಂತಾ ಬೇರೆಯಾಗಲು ವಿಚ್ಛೇದನ ತಜ್ಞ ಬಾಲಿವುಡ್​ ಸೂಪರ್​ಸ್ಟಾರ್​ ಕಾರಣ ಅಂದ್ರು ಕಂಗನಾ..!​

    ಮುಂಬೈ: ಚಿತ್ರರಂಗದಲ್ಲಿ ಈಗ ಸಮಂತಾ-ನಾಗಚೈತನ್ಯ ಡಿವೋರ್ಸ್​ ವಿಚಾರವೇ ಹೆಚ್ಚು ಸದ್ದು ಮಾಡುತ್ತಿದೆ. ಇದುವರೆಗೂ ಸುಮ್ಮನಿದ್ದ ನಾಗಸಮಂತಾ ನಿನ್ನೆ ಅಧಿಕೃತವಾಗಿ ಡಿವೋರ್ಸ್​ ಘೋಷಣೆ ಮಾಡುವ ಮೂಲಕ ವೈವಾಹಿಕ ಜೀವನಕ್ಕೆ ಅರ್ಧದಲ್ಲೇ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಬಹಳ ಬೇಸರ ತರಿಸಿದೆ.

    ನಾಗಸಮಂತಾ ವೈವಾಹಿಕ ಜೀವನದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿರುವ ನಡುವೆಯೇ ಬಾಲಿವುಡ್​ ನಟಿ ಕಂಗನಾ ರಣಾವತ್ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ತಾರಾದಂಪತಿ ಬೇರೆ ಬೇರೆ ಆಗಲು ಯಾರು ಕಾರಣ ಎಂಬುದನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಳ್ಳುವ ಮೂಲಕ ಬಾಲಿವುಡ್​ ಸೂಪರ್​ಸ್ಟಾರ್​ ವಿರುದ್ಧ ಬೊಟ್ಟು ಮಾಡಿದ್ದಾರೆ.

    ದಕ್ಷಿಣ ಭಾರತ ಚಿತ್ರರಂಗದ ಸೂಪರ್​ ಸ್ಟಾರ್​ ಒಬ್ಬರು ಇತ್ತೀಚೆಗೆ ದಿಢೀರನೇ ತಮ್ಮ ಪತ್ನಿಗೆ ವಿಚ್ಛೇದನ ನೀಡುವ ಮೂಲಕ 4 ವರ್ಷದ ವೈವಾಹಿಕ ಜೀವನಕ್ಕೆ ಅಂತ್ಯವಾಡಿದ್ದಾರೆ. ಅವರು ಇತ್ತೀಚೆಗಷ್ಟೇ ಸುಮಾರು 10 ವರ್ಷಗಳ ವೈವಾಹಿಕ ಜೀವನವನ್ನು ಮುರಿದುಕೊಂಡ ಡಿವೋರ್ಸ್​ ತಜ್ಞ ಎಂದೇ ಖ್ಯಾತರಾಗಿರುವ ಬಾಲಿವುಡ್​ ಸೂಪರ್​ಸ್ಟಾರ್​ ಸಂಪರ್ಕಕ್ಕೆ ಬಂದಿದ್ದರು. ಆ ಸೂಪರ್​ಸ್ಟಾರ್​ ಅನೇಕ ಮಹಿಳೆಯರ ಮತ್ತು ಮಕ್ಕಳ ಜೀವನವನ್ನು ಹಾಳು ಮಾಡಿದ್ದಾರೆ. ಈಗ ಅವರ ಮಾರ್ಗದರ್ಶಕ ಬೆಳಕು ದಕ್ಷಿಣ ಭಾರತದ ನಟನ ಮೇಲೆ ಬಿದ್ದಿದೆ. ಇದು ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಎಂದು ಕಂಗನಾ ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಬಾಲಿವುಡ್​ ನಟ ಆಮೀರ್​ ಖಾನ್​, ಕಿರಣ್​ ರಾವ್​ರೊಂದಿಗೆ ಡಿವೋರ್ಸ್​ ಪಡೆದುಕೊಳ್ಳುವ ಮೂಲಕ 10 ವರ್ಷದ ವೈವಾಹಿಕ ಜೀವನಕ್ಕೆ ಬ್ರೇಕ್​ ಹಾಕಿದ್ದಾರೆ. ಅವರನ್ನು ಉದ್ದೇಶಿಸಿ ಕಂಗನಾ ಪೋಸ್ಟ್​ ಮಾಡಿದ್ದಾರೆ. ಇತ್ತೀಚೆಗೆ ಆಮೀರ್​ ಮತ್ತು ನಾಗಚೈತನ್ಯ ತುಂಬಾ ಆಪ್ತರಾಗಿದ್ದಾರೆ. ಅದಕ್ಕೆ ಕಾರಣ ನಾಗಚೈತನ್ಯ ಆಮೀರ್​ ಖಾನ್​ ಅಭಿನಯದ ಲಾಲ್​ ಸಿಂಗ್​ ಚಡ್ಡಾ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ಬಿಗಡೆಯಾದ ನಾಗಚೈತನ್ಯ ಅವರ “ಲವ್​ ಸ್ಟೋರಿ” ಚಿತ್ರದ ಪ್ರೀ ರಿಲೀಸ್​ ಈವೆಂಟ್​ನಲ್ಲೂ ಆಮೀರ್​ ಖಾನ್​ ಪಾಲ್ಗೊಂಡಿದ್ದರು. ಅಲ್ಲದೆ, ನಾಗರ್ಜುನ ಮನೆಯಲ್ಲಿ ಆಮೀರ್​ ಅವರಿಗೆ ಸಣ್ಣ ಪಾರ್ಟಿಯನ್ನು ಸಹ ಆಯೋಜಿಸಲಾಗಿತ್ತು.

    ನಾಗಸಮಂತಾ ಬೇರೆಯಾಗಲು ವಿಚ್ಛೇದನ ತಜ್ಞ ಬಾಲಿವುಡ್​ ಸೂಪರ್​ಸ್ಟಾರ್​ ಕಾರಣ ಅಂದ್ರು ಕಂಗನಾ..!​

    ನಿನ್ನೆ (ಅ.2) ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡಿದ್ದಾರೆ. “ಸಾಕಷ್ಟು ಸಮಾಲೋಚನೆಯ ಬಳಿಕವು ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಬೇರೆ ಬೇರೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ” ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ. ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್​ ಆನ್​ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

    ನಾಗಚೈತನ್ಯ ಮತ್ತು ಸಮಂತಾ ಡಿವೋರ್ಸ್​ ಸುದ್ದಿ ಕೇಳಿ ಅಭಿಮಾನಿಗಳಿಗೆ ಶಾಕ್​ ಆಗಿದೆ. ಅನೇಕರು ನೀವಿಬ್ಬರು ದೂರಾಗಬಾರದಿತ್ತು, ಮತ್ತೆ ಒಂದಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ. (ಏಜೆನ್ಸೀಸ್​​​)

    ಸಮಂತಾ-ನಾಗಚೈತನ್ಯ ಡಿವೋರ್ಸ್​ ಹಿಂದಿನ ಪ್ರಮುಖ ಕಾರಣ ಬಯಲು: ಇಬ್ಬರ ನಡುವೆ ನಡೆದಿತ್ತು ವಾಗ್ವಾದ..!

    ಮದ್ವೆ ಎಂಬುದು ಸಾವು, ಡಿವೋರ್ಸ್​​ ಪುನರ್ಜನ್ಮ: ನಾಗಸಮಂತಾ ವಿಚ್ಛೇದನ ಬೆನ್ನಲ್ಲೇ ಆರ್​ಜಿವಿ ಟ್ವೀಟ್​

    ಡಿವೋರ್ಸ್​ ಬೆನ್ನಲ್ಲೇ ಟ್ವೀಟ್​ ಮೂಲಕ ಖಡಕ್​ ಎಚ್ಚರಿಕೆ ಸಂದೇಶ ರವಾನಿಸಿದ ನಟಿ ಸಮಂತಾ..!

    ನಟಿ ಸೌಜನ್ಯ ಸಾವು ಪ್ರಕರಣ: ಇದ್ದಕ್ಕಿದಂತೆ ವರಸೆ ಬದಲಿಸಿದ ಬಾಯ್​ಫ್ರೆಂಡ್​ ಮೇಲೆ ಪೊಲೀಸರ ಗುಮಾನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts