ಕರಿವೆಲ್ಲೂರು: ನಾರಿ ಮುನಿದರೆ ಮಾರಿ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಅನುಚಿತವಾಗಿ ವರ್ತಿಸಿದ ದುರುಳನನ್ನು ಯುವತಿಯೊಬ್ಬಳು ಅಟ್ಟಿಸಿಕೊಂಡು ಹೋಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೇರಳದ ಕರಿವೆಲ್ಲೂರಿನಲ್ಲಿ ನಡೆದಿದೆ.
ಕಣ್ಣೂರಿನಿಂದ ಕನ್ಹಂಗದ್ ಪ್ರದೇಶಕ್ಕೆ ಕೆಎಸ್ಆರ್ಟಿಸಿ ಮೂಲಕ ಕಣ್ಣೂರಿನ ಕರಿವೇಲೂರು ಮೂಲದ ಆರ್.ಟಿ.ಆರತಿ ಎಂಬಾಕೆ ಪ್ರಯಾಣ ಮಾಡುತ್ತಿದ್ದಳು. ಸರ್ಕಾರದ ನೀತಿಯನ್ನು ವಿರೋಧಿಸಿ ಕೇರಳದ ಖಾಸಗಿ ಬಸ್ಗಳು ಸ್ಟ್ರೈಕ್ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ತುಂಬಿ ತುಳುಕುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬ ಆರತಿ ಜತೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ.
ಆರೋಪಿಯನ್ನು ರಾಜೀವ್ (52) ಎಂದು ಗುರುತಿಸಲಾಗಿದೆ. ಬಸ್ ನೀಲೇಶ್ವರಮ್ಗೆ ತೆರಳುತ್ತಿದ್ದಂತೆ ಆಕೆಯ ಜತೆ ರಾಜೀವ್ ಅನುಚಿತವಾಗಿ ವರ್ತಿಸಿದ್ದಾನೆ. ಅನೇಕ ಬಾರಿ ಆತನಿಗೆ ಆರತಿ ಎಚ್ಚರಿಕೆ ನೀಡಿದರು. ತನ್ನ ನೀಚ ಕೆಲವನ್ನು ಆತ ಮುಂದುವರಿಸಿದ್ದಾನೆ. ಬಸ್ನಲ್ಲಿ ಆರತಿಗೆ ಕಿರುಕುಳ ನೀಡುತ್ತಿದ್ದರೂ ಬಸ್ಸಿನಲ್ಲಿದ್ದ ಯಾರೊಬ್ಬರು ಕೂಡ ಅವಳಿಗೆ ಸಹಾಯ ಮಾಡಲಿಲ್ಲ.
ಇದಾದ ಬಳಿಕ ಆರತಿ ಪಿಂಕ್ ಪೊಲೀಸರಿಗೆ ಕಾಲ್ ಮಾಡಿ ಮಾಹಿತಿ ನೀಡುತ್ತಾಳೆ. ಇದು ಗೊತ್ತಾಗಿ ಬಸಷ್ ಕನ್ಹಾಂಗದ್ ನಿಲ್ದಾಣದಲ್ಲಿ ನಿಲ್ಲುತ್ತಿದ್ದಂತೆ ಬಸ್ನಿಂದ ಇಳಿದು ಆರೋಪಿ ಪರಾರಿಯಾಗುತ್ತಾನೆ. ಆತನನ್ನು ಯಾವುದೇ ಕಾರಣಕ್ಕೂ ಬಿಡಲೇಬಾರದು ಎಂದು ನಿರ್ಧಾರಕ್ಕೆ ಬರುವ ಆರತಿ, ಆತನನ್ನು ಅಟ್ಟಿಸಿಕೊಂಡು ಹೋಗುತ್ತಾಳೆ. ಅಲ್ಲದೆ, ಆರೋಪಿಯು ಮಿಸ್ ಆಗಬಾರದು ಅಂತಾ ಫೋಟೋವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದುಕೊಳ್ಳುತ್ತಾಳೆ. ಆರೋಪಿ ರಾಜೀವ್ ಲಾಟರಿ ಕೊಳ್ಳುವ ಗ್ರಾಹಕನಂತೆ ನಾಟಕವಾಡಿ, ಅಂಗಡಿ ಒಳಗೆ ಹೋದಾಗ ಸ್ಥಳೀಯರ ನೆರವಿನಿಂದ ಆತನನ್ನು ಆರತಿ ಹಿಡಿಯುತ್ತಾಳೆ. ಬಳಿಕ ಆತನನ್ನು ಕನ್ಹಾಂಗದ್ ಪೊಲೀಸರಿಗೆ ಒಪ್ಪಿಸುತ್ತಾಳೆ. ಆಕೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ರಾಜೀವ್ನನ್ನು ಪೊಲೀಸರು ಬಂಧಿಸುತ್ತಾರೆ.
ಈ ಘಟನೆಯ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ವರ್ಷ ಕನ್ಹಂಗಾದ್ನ ನೆಹರು ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ಆರತಿ, ಕಾಲೇಜು ದಿನಗಳಲ್ಲಿ ಎನ್ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿದ್ದರು. ಈ ಹಿಂದೆಯೂ ಆಕೆಗೆ ಬಸ್ಸಿನಲ್ಲಿ ಇಂತಹ ಅನುಭವವಾಗಿತ್ತು. ಆದರೆ, ಆಕೆ ಪೊಲೀಸರಿಗೆ ಕರೆ ಮಾಡುವ ಮುನ್ನವೇ ಆ ವ್ಯಕ್ತಿ ಓಡಿ ಹೋಗಿದ್ದ. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ. (ಏಜೆನ್ಸೀಸ್)
ಪ್ರತಿ ಕಿ.ಮೀಗೆ ಕೇವಲ 2 ರೂ. ವೆಚ್ಚ: ಸಂಸತ್ತಿಗೆ ಸಾರಿಗೆ ಸಚಿವರು ಬಂದಿಳಿದ ಹೈಡ್ರೋಜನ್ ಕಾರಿನ ವಿಶೇಷತೆ ಹೀಗಿದೆ..
ಜೀವನದಲ್ಲಿ ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ: ಅತ್ಯಂತ ನೋವಿನ ಕ್ಷಣ ಬಿಚ್ಚಿಟ್ಟ ಪ್ರಕಾಶ್ ರಾಜ್