More

    ಗುತ್ತಿಗೆದಾರ ಸಂತೋಷ್ ಮೃತದೇಹ ಹುಟ್ಟೂರು ತಲುಪುತ್ತಿದ್ದಂತೆ​ ಪೊಲೀಸರು ಮತ್ತು ಕುಟುಂಬಸ್ಥರ ಮಧ್ಯೆ ವಾಗ್ವಾದ

    ಬೆಳಗಾವಿ: ಸಚಿವ ಕೆ.ಎಸ್​. ಈಶ್ವರಪ್ಪ ಮೇಲೆ 40% ಕಮಿಷನ್​ ಆರೋಪ ಮಾಡಿ ಆತ್ಮಹತ್ಯೆ ಶರಣಾಗಿರುವ ಗುತ್ತಿಗೆದಾರ ಸಂತೋಷ ಪಾಟೀಲ್ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಅವರ ಪಾರ್ಥಿವ ಶರೀರ ಬೆಳಗಾವಿ ಗಡಿ ತಲುಪಿದೆ.

    ಎಸ್ಕಾರ್ಟ್​ ಮುಖಾಂತರ ಪಾರ್ಥಿವ ಶರೀರವನ್ನು ಬೆಳಗಾವಿ ಜಿಲ್ಲಾ ಮತ್ತು ನಗರ ಪೊಲೀಸರು ಸ್ವೀಕರಿಸಿದ್ದಾರೆ. ಆದರೆ, ಸಂತೋಷ್​ ಮೃತದೇಹ ಹುಟ್ಟೂರಿಗೆ ಹೋಗುತ್ತಿದ್ದಂತೆ ಮೃತ ಸಂತೋಷ ಸಹೋದರ ಬಸನಗೌಡ ಪಾಟೀಲ್​ ಆರೋಪಿಗಳ ಬಂಧನಕ್ಕೆ ಪಟ್ಟು ಹಿಡಿದಿದ್ದಾರೆ.

    ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಕಮೀಷನರ್ ಕಚೇರಿ ಮುಂದೆ ಪ್ರತಿಭಟನೆ ಮಾಡಲು ಶವ ತೆಗೆದುಕೊಂಡ ಹೋಗಲು ಬಸನಗೌಡ ಪಾಟೀಲ ಮುಂದಾದರು. ಕಮೀಷನರ್ ಕಚೇರಿಗೆ ಹೋಗುವಾಗ ಮಾರ್ಗ ಮಧ್ಯದಲ್ಲೆ ಪೊಲೀಸರು ತಡೆದರು. ಈ ವೇಳೆ ಬಸನಗೌಡ ಪಾಟೀಲ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

    ಆರೋಪಿಗಳನ್ನ ಬಂಧಿಸುವಂತೆ ಪಟ್ಟು ಹಿಡಿದ ಬಸನಗೌಡ ಪಾಟೀಲ, ಬೇಕಾದ್ರೆ ನಿಮ್ಮ ಮೇಲಾಧಿಕಾರಿಗಳಿಗೆ ಮಾತನಾಡಿ ಎಂದರು. ಈ ವೇಳೆ ಮೇಲಾಧಿಕಾರಿಗಳ ಜತೆಗೆ ಡಿಸಿಪಿ ರವೀಂದ್ರ ಗಡಾದೆ ಮಾತನಾಡಿದರು. ಆರೋಪಿಗಳನ್ನ ಬಂಧಿಸುವ ಭರವಸೆ ನೀಡಿದ ಹಿನ್ನೆಲೆ ಕುಟುಂಬಸ್ಥರು ಪಟ್ಟು ಸಡಿಲಿಸಿದರು.

    ಸದ್ಯ ಸಂತೋಷ್​ ಮೃತದೇಹವನ್ನು ಹುಟ್ಟೂರು ಕಡೆ ತೆಗೆದುಕೊಂಡು ಹೋಗಲಾಗಿದೆ. ಕೆಲಕಾಲ ಗೊಂದಲ ವಾತಾವರಣ ಮೂಡಿ ಆತಂಕ ಸೃಷ್ಟಿಯಾಗಿತ್ತು. ಈಗ ವಾತಾವರಣ ತಿಳಿಯಾಗಿದೆ. (ದಿಗ್ವಿಜಯ ನ್ಯೂಸ್​)

    ಸಪ್ತಪದಿಗೆ ಹೊಸ ಮುಹೂರ್ತ ಫಿಕ್ಸ್; 28, ಮೇ 11, 25ಕ್ಕೆ ಸಾಮೂಹಿಕ ವಿವಾಹ

    ಆಧಾರರಹಿತ ಆರೋಪ, ತೇಜೋವಧೆಗೆ ನಾವು ಹೆದರಲ್ಲ; ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ

    ಈಶ್ವರಪ್ಪ ಅಚಲ, ಬಿಜೆಪಿ ಚಂಚಲ; ರಾಜೀನಾಮೆ ವಿಚಾರದಲ್ಲಿ ರಾಜಿ?: ಸಚಿವರ ವಿರುದ್ಧ ಎಫ್​ಐಆರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts