ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.
ಜೇವರ್ಗಿ ಠಾಣೆಯ ಕಾನ್ಸ್ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು ಅವ್ವಣ್ಣ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಅಬ್ದುಲ್ ರೌಫ್ ಕರ್ನೂಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಪೇದೆಗಳಿಬ್ಬರನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯಿಂದ ಖದರ್ ಕಳೆದುಕೊಂಡು ಕಳಾಹೀನವಾಗಿದ್ದ ಲೋಕಾಯುಕ್ತಕ್ಕೆ ಹೈಕೋರ್ಟ್ ಮರುಜೀವ ನೀಡಿದ ಬಳಿಕ, ಸಕ್ರೀಯವಾಗಿರುವ ಲೋಕಾಯುಕ್ತವು, ಸರ್ಕಾರದ ವ್ಯವಸ್ಥೆಯಲ್ಲಿ ಅಡಗಿರುವ ಭ್ರಷ್ಟರ ಮುಖವಾಡಗಳನ್ನು ಕಳಚುತ್ತಿದೆ. (ದಿಗ್ವಿಜಯ ನ್ಯೂಸ್)
ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?
ಈವರೆಗೂ ನೋಡಿರದ ಮೀರಾ ಜಾಸ್ಮಿನ್ ಹಾಟ್ ಅವತಾರ! ಮಲಯಾಳಿ ಬ್ಯೂಟಿಯ ಮೈಮಾಟಕ್ಕೆ ಫ್ಯಾನ್ಸ್ ಫಿದಾ