ಕಲಬುರಗಿ: 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ​ ಬಲೆಗೆ ಬಿದ್ದ ಇಬ್ಬರು ಕಾನ್ಸ್​ಟೇಬಲ್​​ಗಳು

ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಜೇವರ್ಗಿ ಠಾಣೆಯ ಕಾನ್ಸ್​ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು ಅವ್ವಣ್ಣ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ … Continue reading ಕಲಬುರಗಿ: 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ​ ಬಲೆಗೆ ಬಿದ್ದ ಇಬ್ಬರು ಕಾನ್ಸ್​ಟೇಬಲ್​​ಗಳು