More

    ಅಕ್ಕನ ಮಗಳ ಪ್ರೀತಿಗೆ ಎಲ್ಲರ ಒಪ್ಪಿಗೆ ಇತ್ತು: ಖುಷಿಯಿಂದ್ಲೇ ಬರ್ತಡೇ ಆಚರಿಸಿದ ಯುವಕ ಸಾವಿನ ಹಾದಿ ಹಿಡಿದಿದ್ದೇಕೆ?

    ಬೆಂಗಳೂರು: ಲವ್​ ಬ್ರೇಕ್​ ಅಪ್​ ಆಗಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಆರ್.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ಸಿದ್ದರಾಮ. ಈತ ಮಂಡ್ಯ ಮೂಲದವನಾಗಿದ್ದು ಬೆಂಗಳೂರಿನಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ. ಮೃತ ಸಿದ್ದರಾಮ ತನ್ನ ಅಕ್ಕನ ಮಗಳನ್ನು ಪ್ರೀತಿಸುತ್ತಿದ್ದ. ಇಬ್ಬರ ಪ್ರೀತಿಯ ವಿಚಾರ ಇಡೀ ಕುಟುಂಬಕ್ಕೆ ಗೊತ್ತಿತ್ತು. ಇಬ್ಬರ ಪ್ರೀತಿಗೆ ಮನೆಯವರ ವಿರೋಧವೂ ಇರಲಿಲ್ಲ. ಪ್ರೇಯಸಿ ಜತೆಗೆ ಖುಷಿ ಖುಷಿಯುಂದಲೇ ಬರ್ತಡೇ ಕೂಡ ಆಚರಿಸಿಕೊಂಡಿದ್ದ.

    ಇಬ್ಬರ ನಡುವೆ ಎಲ್ಲವೂ ಸರಿಯಿತ್ತು. ಆದರೆ, ಮೂರು ತಿಂಗಳಿಂದ ಯಾವುದೋ ಕಾರಣದಿಂದ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿದ್ದರಾಮ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಆರ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಮನೆಯಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಿದ್ದರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಆರ್​ಆರ್​ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಯುವಕನ ಮೃತದೇಹ ರವಾನಿಸಿ, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಲ್ಯಾಗ್​ ಮಂಜು-ದಿವ್ಯಾ ಸುರೇಶ್​ ಬಗ್ಗೆ ಹರಿದಾಡ್ತಿರೋ ಸುದ್ದಿ ನಿಜನಾ? ಹೌದು ಅನ್ನುವಂತಿದೆ ಈ ವೈರಲ್​ ಫೋಟೋ!

    ರಾಮ್ ಚರಣ್​ ಬೇಡ ಅಂದಿದ್ರೂ ಸಮಂತಾ ಲಿಪ್​ಲಾಕ್: ರಂಗಸ್ಥಳಂ ಚಿತ್ರದ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ನಿರ್ದೇಶಕ!

    ಪಾಕ್​ ವಿರುದ್ಧ ಕಾಬುಲ್​ನಲ್ಲಿ ಆಫ್ಘಾನ್ನರ ಪ್ರತಿಭಟನೆ: ಗಾಳಿಯಲ್ಲಿ ಗುಂಡು ಹಾರಿಸಿದ ತಾಲಿಬಾನಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts