ಪ್ರೀತಿಸಿ ಮದ್ವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್! ಮನನೊಂದು ಗಂಡ ಆತ್ಮಹತ್ಯೆಗೆ ಶರಣು

ವಿಜಯಪುರ: ಪ್ರೀತಿಸಿ ಮದುವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್​ ಆಗಿದ್ದಾಳೆ ಎನ್ನಲಾದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿಯ ವರ್ತನೆಯಿಂದ ಮನನೊಂದ ಗಂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೆಂಕಟೇಶ ದೋರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡಾತ. ಸಾವಿಗೂ ಮುನ್ನ ವೆಂಕಟೇಶ್​ ಫೇಸ್​ಬುಕ್​ನಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ನೇಣಿಗೆ ಶರಣಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್​ ಮತ್ತು ಯುವತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವೆಂಕಟೇಶ್​ ಪಕ್ಕದ ಮನೆಯ ಸೋದರ ಸಂಬಂಧಿ … Continue reading ಪ್ರೀತಿಸಿ ಮದ್ವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್! ಮನನೊಂದು ಗಂಡ ಆತ್ಮಹತ್ಯೆಗೆ ಶರಣು