More

    ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್​ನಲ್ಲಿತ್ತು ಸಾವಿನ ರಹಸ್ಯ

    ಮಲಪ್ಪುರಂ: ಮದುವೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕಳೆದ ಜೂನ್​ ತಿಂಗಳಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾವಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಮಾನ್ಯ (22) ಮೃತ ಯುವತಿ. ಆರೋಪಿ ಅಶ್ವಿನ್​ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಥ್ರಿಕ್ಕಾಲಯೂರ್​ ಮೂಲದ ಮಾನ್ಯ, ಕಳೆದ ಜೂನ್​ನಲ್ಲಿ ತನ್ನ ಮನೆಯ ಬೆಡ್​ರೂಪ್​ನಲ್ಲಿ ನೇಣಿಗೆ ಶರಣಾಗಿದ್ದರು. ಘಟನೆ ನಡೆದ ಎರಡು ತಿಂಗಳ ಬಳಿಕ ಅಶ್ವಿನ್​​ ಬಂಧನವಾಗಿದೆ.

    ಮಾನ್ಯ ಕುಟುಂಬ ಆರೋಪ ಮಾಡಿದ ಬಳಿಕ ಅರೀಕೋಡ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನಮ್ಮ ಮಗಳು ಸಾವಿನ ಬಗ್ಗೆ ನಮಗೆ ಅನುಮಾನ ಇದೆ ಮತ್ತು ಈ ಪ್ರಕರಣದ ತನಿಖೆ ಆಗಬೇಕೆಂದು ಕುಟುಂಬ ಒತ್ತಾಯ ಮಾಡಿತ್ತು. ಪ್ರಕರಣ ದಾಖಲಿಸಿಕೊಂಡ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಅಶ್ವಿನ್​ ಕಿರುಕುಳದಿಂದಲೇ ಮಾನ್ಯ ಮೃತಪಟ್ಟಿರುವುದು ಮೊಬೈಲ್​ನಿಂದ ಬಹಿರಂಗವಾಗಿದೆ.

    ಮಾನ್ಯ ಅವರು ಬಳಸುತ್ತಿದ್ದ ಫೋನ್‌ನಿಂದ ಅವರ ಧ್ವನಿ ಸಂದೇಶಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. 2021ರ ಸೆಪ್ಟೆಂಬರ್​ನಲ್ಲಿ ನಿಶ್ಚಿತಾರ್ಥ ಆಗುವ ಮುನ್ನ ಕಳೆದ 8 ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು. ಕೆಲಸಕ್ಕೆಂದು ಅಶ್ವಿನ್​ ವಿದೇಶಕ್ಕೆ ಹೋಗಿದ್ದ. ಇದರ ನಡುವೆ ಇಬ್ಬರ ಪ್ರೀತಿಯಲ್ಲಿ ಸಾಕಷ್ಟು ಏರಿಳಿತಗಳ ಸಂಭವಿಸಿದ್ದವು. ಮದುವೆಯಿಂದ ದೂರ ಉಳಿಯುವ ಅಶ್ವಿನ್ ನಿರ್ಧಾರದಿಂದ ಬೇಸತ್ತು ಮಾನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿದೇಶದಿಂದ ಮರಳಿದ ನಂತರ ಆರೋಪಿ ಅಶ್ವಿನ್​ನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. (ಏಜೆನ್ಸೀಸ್​)

    ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಹಿಂದು ಸಂಘಟನೆಗಳಿಂದ ಹರ್ಷೋದ್ಘಾರ

    ಹಪ್ಪಳಕ್ಕಾಗಿ ಮದುವೆ ಮಂಟಪದಲ್ಲಿ ನಡೆಯಿತು ಭಾರಿ ಗಲಾಟೆ: ನಷ್ಟವಾಗಿದ್ದು ಬರೋಬರಿ 1.5 ಲಕ್ಷ ರೂಪಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts