More

    ಸರ್ಕಾರಿ ಕೆಲ್ಸಕ್ಕೆ ಸೇರಿದ ಎಂಟೇ ದಿನಕ್ಕೆ ಯುವತಿ ದುರ್ಮರಣ: ದಿನಗೂಲಿ ನೌಕರನ ಆಸೆಗೆ ಬಲಿಯಾಯ್ತು ಜೀವ

    ಕೋಯಿಕ್ಕೋಡ್​: ದಿನಗೂಲಿ ನೌಕರನೊಬ್ಬ ಪಂಚಾಯತ್ ಕಚೇರಿ ಮಹಿಳಾ ಉದ್ಯೋಗಿಯೊಬ್ಬರಿಗೆ ಬೆಂಕಿಯಿಟ್ಟು, ತಾನೂ ಬೆಂಕಿ ಹಚ್ಚಿಕೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.

    ಸಿಂಧೂರಿ ಅಲಿಯಾಸ್​ ಕೃಷ್ಣಪ್ರಿಯಾ (22) ಕೊಲೆಯಾದ ದುರ್ದೈವಿ. ಥಿಕ್ಕೋಡಿ ನಿವಾಸಿ ನಂದನ್​ಕುಮಾರ್​ (26) ಎಂಬಾತ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಬೆಂಕಿ ಹಚ್ಚಿಕೊಂಡಿದ್ದ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಆತನನ್ನು ಕೋಯಿಕ್ಕೋಡ್​ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶುಕ್ರವಾರ ಕೊನೆಯುಸಿರೆಳೆದಿದ್ದಾನೆ. ಕೃಷ್ಣಪ್ರಿಯಾ ಕೂಡ ಶುಕ್ರವಾರ ರಾತ್ರಿ ಮೃತಪಟ್ಟರು.

    ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್​ ಸೈನ್ಸ್​ ಮುಗಿಸಿದ್ದ ಕೃಷ್ಣಪ್ರಿಯಾ, ಪಂಚಾಯತ್​ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ ಕೇವಲ 8 ದಿನಗಳ ಹಿಂದಷ್ಟೇ ಸೇರಿದ್ದರು. ನಂದನ್​ಕುಮಾರ್​ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ.

    ಶುಕ್ರವಾರ ಪಂಚಾಯತ್​ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ನಂದನ್​ ಬೆಂಕಿ ಹಚ್ಚಿದ್ದ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಈ ವೇಳೆ ಪಂಚಾಯತ್​ ಕಚೇರಿಯ ಸಿಬ್ಬಂದಿ ಗೋವಿಂದನ್​ ಎಂಬುವರು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.

    ಮದುವೆ ಪ್ರಸ್ತಾಪವನ್ನು ಕೃಷ್ಣಪ್ರಿಯಾ ತಿರಸ್ಕರಿಸಿದ್ದಕ್ಕೆ ನಂದನ್​ ಈ ಕೃತ್ಯ ಎಸಗಿದ್ದಾನೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಘಟನೆಗೆ ನಿಖರ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

    ಆತ್ಮಹತ್ಯೆ ತಡೆಗೆ ಹಾಸ್ಟೆಲ್​ನಲ್ಲಿ ಸೀಲಿಂಗ್​ ಫ್ಯಾನ್ಸ್​ ತೆರವು: ವಿರೋಧದ ಮಧ್ಯೆಯೂ ಬೆಂಗ್ಳೂರಿನ IISc ಕಾರ್ಯಾಚರಣೆ

    ಮದ್ವೆಯಾದ ಎರಡೇ ವರ್ಷದಲ್ಲಿ ಗಂಡ ನಾಪತ್ತೆ: ಮತ್ತೊಂದು ಮದ್ವೆಯಾದವಳಿಗೆ 12 ವರ್ಷದ ಬಳಿಕ ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts