ಮಂಡ್ಯ: ದಕ್ಷಿಣ ಕನ್ನಡದಲ್ಲಿ ಹೆಚ್ಚಾಗಿ ವರದಿಯಾಗುತ್ತಿದ್ದ ನೈತಿಕ ಪೊಲೀಸ್ ಗಿರಿ ಇದೀಗ ಸಕ್ಕರೆನಾಡು ಮಂಡ್ಯದಲ್ಲೂ ಕೇಳಿಬಂದಿದೆ. 4 ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲೂ ನೈತಿಕ ಪೊಲೀಸ್ ಗಿರಿ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅನ್ಯಕೋಮಿನ ಹುಡುಗ-ಹುಡುಗಿ ತೆರಳುತ್ತಿದ್ದ ಬೈಕ್ ಅನ್ನು ತಡೆದು ನಿಲ್ಲಿಸಿ, ಇಬ್ಬರನ್ನು ಕೆಳಗಿಳಿಸಿ ನೈತಿಕ ಪೊಲೀಸ್ ಗಿರಿ ಮಾಡಲಾಗಿದೆ. ಸಂಘಟನೆಯೊಂದರ ಕಾರ್ಯಕರ್ತರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ. ಮಂಡ್ಯ ತಾಲೂಕಿನ ಸುಂಡಹಳ್ಳಿ ಬಳಿ 4 ದಿನದ ಹಿಂದೆ ಘಟನೆ ನಡೆದಿದೆ. ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆಗೂ ಯತ್ನ ನಡೆದಿದೆ.
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಅನ್ಯಕೋಮಿನ ಯುವಕನ ಜತೆ ಯುವತಿ ಹೋಗುತ್ತಿದ್ದಳು. ಇದನ್ನು ನೋಡಿದ ಕಾರ್ಯಕರ್ತರು ಶ್ರೀರಂಗಪಟ್ಟಣದಿಂದಲೂ ಬೈಕ್ ಹಿಂಬಾಲಿಸಿಕೊಂಡು ಬಂದು ಬೈಕ್ ಅಡ್ಡಗಟ್ಟಿದ್ದಾರೆ. ಕೆಲ ಕಾಲ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಯುವತಿಯನ್ನು ಕಾರ್ಯಕರ್ತರು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಫ್ರೆಂಡ್ಸ್ಗೆಲ್ಲಾ ಮದ್ವೆಯಾಗಿ ಮಕ್ಕಳಾದ್ರೂ ತನಗೆ ಹುಡುಗಿ ಸಿಕ್ತಿಲ್ಲ ಎಂದು ನೊಂದು ಯುವಕನ ಆತ್ಮಹತ್ಯೆ!
ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಬಿಂಬಿಸಲು ಸಂಚು ರೂಪಿಸಿ ಸಿಕ್ಕಿಬಿದ್ದ ಖತರ್ನಾಕ್ ಪತ್ನಿ..!
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೊಬೈಲ್ ಫೋನ್ ಕದ್ದು ಬಳಸುತ್ತಿದ್ದ ಎಸ್ಐಗೆ ಬಿಗ್ ಶಾಕ್..!