ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಪೂರ್ವ ಚಟುವಟಿಕೆ ಆರಂಭವಾಗಿದ್ದು, ಘಟಾನುಘಟಿ ನಾಯಕರ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಇಂದು ಸಮರೋಪಾದಿಯಲ್ಲಿ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವ ವರ್ತೂರು ಪ್ರಕಾಶ್, ಉಡುಪಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜೆಡಿಎಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ ಸಂದೇಶ್ ನಾಗರಾಜು, ಮಾಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ನಾಯಕ ಕೆ.ಎಸ್. ಮಂಜುನಾಥ್ ಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಹಲವು ಸಚಿವರ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.
ಇದಿಷ್ಟೇ ಅಲ್ಲದೆ, ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ. ಕೃಷ್ಣಮೂರ್ತಿ, ಜೆಡಿಎಸ್ನ ಮಂಡ್ಯ ಜಿಲ್ಲಾ ಮುಖಂಡರಾದ ಅಶೋಕ್ ಜಯರಾಮ್ ಹಾಗೂ ಮಾಜಿ ಐಆರ್ಎಸ್ ಅಧಿಕಾರಿ ಮತ್ತು ಜೆಡಿಎಸ್ ಮುಖಂಡೆ ಡಾ. ಲಕ್ಷ್ಮೀ ಅಶ್ವಿನ್ಗೌಡ ಅವರು ಬಿಜೆಪಿ ಸೇರಿದರು.
ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇದ್ದು, ಘಟಾನುಘಟಿ ನಾಯಕರು ಬಿಜೆಪಿಗೆ ಮಹಾ ವಲಸೆ ಬರುತ್ತಿರುವುದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ನಡುಕ ಹುಟ್ಟಿಸಿದೆ. ಈಗಾಗಲೇ ಬಿಜೆಪಿ ಚುನಾವಣಾ ಸಿದ್ಧತೆಯನ್ನು ಆರಂಭಿಸಿದ್ದು, ಇತರೆ ಪಕ್ಷದ ನಾಯಕರನ್ನು ಬರ ಮಾಡಿಕೊಳ್ಳುವ ಮೂಲಕ ಮುಂದಿನ ಚುನಾವಣೆಗೆ ಬಲಿಷ್ಠವಾಗುತ್ತಿದೆ. ಇತ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಮುಂದೇನು ಎಂಬ ಲೆಕ್ಕಾಚಾರದಲ್ಲಿ ತೊಡಗಿವೆ.
ಐಪಿಎಲ್ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ಹೊರಹಾಕಿದ ವಿಂಡೀಸ್ ದೈತ್ಯ ಕ್ರಿಸ್ ಗೇಲ್!
ಡಿಎಂಕೆ ಸರ್ಕಾರಕ್ಕೆ 1 ವರ್ಷ: ಸರ್ಕಾರಿ ಬಸ್ ಏರಿ ಸರ್ಪ್ರೈಸ್ ಕೊಟ್ಟ ತಮಿಳುನಾಡು ಸಿಎಂ ಸ್ಟಾಲಿನ್!