ಉಡುಪಿ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹುತಾತ್ಮರಾದ 13 ಮಂದಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕೂಡ ಒಬ್ಬರು. ಇವರಿಗೂ ಮತ್ತು ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿರುವುದು ಇದೀಗ ತಿಳಿದುಬಂದಿದೆ.
ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಸಾಲ್ಮರದ ಪ್ರಫುಲ್ಲಾ ಎಂಬವರನ್ನು ವಿವಾಹವಾಗಿದ್ದರು. ಪ್ರಫುಲ್ಲಾ ಸೇನೆಯಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಅನಿರೀಕ್ಷಿತ ಘಟನೆಯಲ್ಲಿ ಹರ್ಜಿಂದರ್ ಸಿಂಗ್ ಹುತಾತ್ಮರಾಗಿರುವುದನ್ನು ನೋಡಿ ಸಾಲ್ಮರದ ಮಿನೇಜಸ್ ಕುಟುಂಬ ದುಃಖತಪ್ತರಾಗಿದೆ.
ಮೃತ ಸಿಂಗ್ ಅವರನ್ನು ನೆನೆದು ಕುಟುಂಬ ಕಣ್ಣೀರು ಹಾಕಿದೆ. ಪ್ರಫುಲ್ಲಾ ಅವರ ತಾಯಿ ಮೇರಿ ಹಾಗೂ ಅವರ ಅಕ್ಕ-ಬಾವ ಬೇಸರ ವ್ಯಕ್ತಪಡಿಸಿದ್ದಾರೆ.
ನಿನ್ನೆ ವೆಲ್ಲಿಂಗ್ಟನ್ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್ಗೆಂದು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಬುಧವಾರ ರಷ್ಯಾ ನಿರ್ಮಿತ ಸೇನಾ ಹೆಲಿಕಾಪ್ಟರ್ Mi-17V5 ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಹೆಲಿಕಾಪ್ಟರ್ ಪತನಗೊಂಡು ಬಿಪಿನ್ ರಾವತ್ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಹುತಾತ್ಮರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. (ದಿಗ್ವಿಜಯ ನ್ಯೂಸ್)
ಜನರಲ್ ಬಿಪಿನ್ ರಾವತ್ ಅವರ ಕೊನೇ ಆಸೆ ಏನಿತ್ತು? ತಮ್ಮ ಗ್ರಾಮದ ಜನರ ಸ್ಥಿತಿ ನೋಡಿ ಕಣ್ಣೀರಿಟ್ಟಿದ್ದರು
ಸೇನಾ ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥರಿದ್ದ ಕಾಪ್ಟರ್ ಪತನಕ್ಕೂ ಮುನ್ನ ಕೊನೇ ದೃಶ್ಯ ಲಭ್ಯ
ಹೆಲಿಕಾಪ್ಟರ್ ಪತನದ ವೈರಲ್ ವಿಡಿಯೋಗೂ ಸೇನಾ ಮುಖ್ಯಸ್ಥರಿದ್ದ ಕಾಪ್ಟರ್ ಪತನಕ್ಕೂ ಸಂಬಂಧವಿಲ್ಲ: ನಿಜಾಂಶ ಇಲ್ಲಿದೆ!
ಪಶ್ಚಿಮಘಟ್ಟದಲ್ಲಿ 2 ಸೇನಾ ಕಾಪ್ಟರ್ಗಳ ಪತನ ಇನ್ನೂ ನಿಗೂಢ; 1998, 2003ರಲ್ಲಿ ಪ್ರತ್ಯೇಕ ಅಪಘಾತ