More

    ಲೈಂಗಿಕ ದೌರ್ಜನ್ಯ ಆರೋಪ: ಮುರುಘಾಮಠದ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

    ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನವಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರನ್ನು ಸೆ. 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅವರನ್ನು ಚಿತ್ರದುರ್ಗದ 2ನೇ ಅಪರ ಸತ್ರ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು. ಬಳಿಕ ಶ್ರೀಗಳಿಗೆ ಸೆ.14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ನ್ಯಾಯಾಧೀಶೆ ಕೋಮಲಾ ಅವರು ಆದೇಶಿಸಿದರು.

    ಕೋರ್ಟಿಗೆ ಹಾಜರು ಪಡಿಸುವ ಮುನ್ನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಯಿತು. ಕೋರ್ಟ್​ಗೆ ಹಾಜರು ಪಡಿಸುವ ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಶರಣರಿಗೆ ಜಾಮೀನು ಕೋರಿ ಅವರ ಪರ ವಕೀಲರು ಶನಿವಾರವೇ ಅರ್ಜಿ ಸಲ್ಲಿಸಿದ್ದಾರೆ. ಸೆ.7ರಂದು ಈ ಅರ್ಜಿ ವಿಚಾರಣೆಗೆ ಬರಲಿದೆ.

    ಮಠಗಳಲ್ಲಿ ಲೈಂಗಿಕ ಹಗರಣ: ಮಹಿಳೆಯರ ಆಡಿಯೋ ವೈರಲ್​- ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ

    ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ: ವರುಣನ ಅಬ್ಬರ ಮುಂದುವರಿದರೆ ಸಿಲಿಕಾನ್​ ಸಿಟಿಗೆ ಆಪತ್ತು

    ಕೇವಲ 2 ರೂಪಾಯಿಗೆ ಭರ್ಜರಿ ನಾನ್​ ವೆಜ್​ ಊಟ! ಚಿಕನ್​, ಮೊಟ್ಟೆಗಾಗಿ ಮುಗಿಬಿದ್ದ ಜನರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts