ಪ್ರೀತಿಯ ಬಲೆಗೆ ಬಿದ್ದು ಎಲ್ಲವನ್ನು ಒಪ್ಪಿಸಿದ ಯುವತಿಗೆ ಪ್ರಿಯಕರನ ಹುಟ್ಟುಹಬ್ಬದಂದು ಕಾದಿತ್ತು ಶಾಕ್​!

ಮೈಸೂರು: ಪ್ರೀತಿಯ ಹೆಸರಲ್ಲಿ ಮೋಸ ಹೋದ ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಪ್ರೀತಿಯ ಬಲೆಗೆ ಬಿದ್ದು ತನ್ನ ದೇಹವನ್ನು ಪ್ರಿಯಕರನಿಗೆ ಒಪ್ಪಿಸಿದ ಯುವತಿ ಇಂದು ವಂಚಿತಳಾಗಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾಳೆ. ಕಂದೇಗಾಲ ಗ್ರಾಮದ ಪ್ರಭುಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇಬ್ಬರು ಒಂದೇ ಗ್ರಾಮದವರು. ಪ್ರಿಯಕರ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಭುಸ್ವಾಮಿ ಬರ್ತಡೇ … Continue reading ಪ್ರೀತಿಯ ಬಲೆಗೆ ಬಿದ್ದು ಎಲ್ಲವನ್ನು ಒಪ್ಪಿಸಿದ ಯುವತಿಗೆ ಪ್ರಿಯಕರನ ಹುಟ್ಟುಹಬ್ಬದಂದು ಕಾದಿತ್ತು ಶಾಕ್​!