More

    ಸಾಲಕ್ಕೆ ಹೆದರಿ ದುಡುಕಿನ ನಿರ್ಧಾರ: ಮದ್ವೆಯಾದ ಎರಡೇ ವರ್ಷಕ್ಕೆ ಮೈಸೂರಿನಲ್ಲಿ ದಂಪತಿ ಬದುಕು ದುರಂತ ಅಂತ್ಯ

    ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್​ನಲ್ಲಿ ನಿನ್ನೆ (ಜ.26) ನಡೆದಿದೆ.

    ಸಂತೋಷ್(26) ಮತ್ತು ಭವ್ಯಾ (22) ಮೃತ ದಂಪತಿ. ಮೊದಲು ಊಟದಲ್ಲಿ ವಿಷ ಬೆರೆಸಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದು ಕುಟುಂಬಸ್ಥರಿಗೆ ತಿಳಿದು ಕೂಡಲೇ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆಗೆ ಸಹಕರಿಸದೆ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

    ಮದುವೆಯಾಗಿ ಕೇವಲ ಎರಡು ವರ್ಷ ಕಳೆದಿತ್ತು. ಕಳೆದ ಕೆಲ ದಿನಗಳಿಂದ ದಂಪತಿ ಆರ್ಥಿಕ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದರು. ಹೀಗಾಗಿ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಉದಯಗಿರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಫೆಬ್ರುವರಿಯಲ್ಲಿ ಶಾಲೆ ಓಪನ್‌ ಆಗತ್ತಾ? ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತಾ? ಸಚಿವ ನಾಗೇಶ್ ಹೇಳಿದ್ದೇನು ನೋಡಿ…

    ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್​: ಹಳೇ ಫೋನ್​ ಕೊಡಲು ಒಪ್ಪದ ನಟ ದಿಲೀಪ್, ಅಂಥದ್ದೇನಿದೆ ಅದರಲ್ಲಿ?

    ಹರಿಪ್ರಸಾದ್​ಗೆ ಒಲಿದ ಪ್ರತಿಪಕ್ಷ ನಾಯಕ ಸ್ಥಾನ: 17 ರಾಜ್ಯಗಳ ಉಸ್ತುವಾರಿಗೆ ಒಲಿದ ಪರಿಷತ್ ಉಸ್ತುವಾರಿ

    ಕ್ಷೇತ್ರ ಆಯ್ಕೆ ಬಗ್ಗೆ ಬಾಯಿಬಿಡದ ಸಿದ್ದರಾಮಯ್ಯ: ಮಾಜಿ ಸಿಎಂ ನಡೆಗೆ ರಾಜಕೀಯ ವಲಯದಲ್ಲೂ ಕುತೂಹಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts