ಮೈಸೂರು ವಿಶ್ವವಿದ್ಯಾಲಯದಿಂದ ನಟ ಪುನೀತ್​​ ರಾಜ್​ಕುಮಾರ್​ಗೆ ಗೌರವ ಡಾಕ್ಟರೇಟ್ ಘೋಷಣೆ​

ಮೈಸೂರು: ಮರಣೋತ್ತರ ಕರ್ನಾಟಕ ರತ್ನ ಗೌರವದ ಬೆನ್ನಲ್ಲೇ ದಿವಂಗತ ನಟ ಪುನೀತ್ ರಾಜ್‍ಕುಮಾರ್‌ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆಯಾಗಿದ್ದು, ಚಿತ್ರರಂಗ ಮಾತ್ರವಲ್ಲದೆ, ಸಮಾಜಮುಖಿ ಕೆಲಸಗಳನ್ನು ಮಾಡಿ ಅಕಾಲಿಕವಾಗಿ ಮರೆಯಾದ ಅಪ್ಪುಗೆ ಮತ್ತೊಂದು ಗೌರವ ಸಿಕ್ಕಂತಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್​ ಅವರು ಪುನೀತ್​ ಅವರಿಗೆ ಗೌರವ ಡಾಕ್ಟರೇಟ್​ ಅನ್ನು ಘೋಷಣೆ ಮಾಡಿದ್ದಾರೆ.‌ ಮೈಸೂರಿನ ಕ್ರಾಫರ್ಡ್​ ಭವನದಲ್ಲಿ ಗೌರವ ಡಾಕ್ಟರೇಟ್​ ಅನ್ನು ರಾಜ್ಯಪಾಲರು ಪ್ರದಾನ ಮಾಡಲಿದ್ದಾರೆ. ‌ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು … Continue reading ಮೈಸೂರು ವಿಶ್ವವಿದ್ಯಾಲಯದಿಂದ ನಟ ಪುನೀತ್​​ ರಾಜ್​ಕುಮಾರ್​ಗೆ ಗೌರವ ಡಾಕ್ಟರೇಟ್ ಘೋಷಣೆ​