More

    ಅಲ್ಲು ಅರ್ಜುನ್​, ಮಂಚು ಮನೋಜ್ ಬಳಿಕ​ ನಟ ನಾಗಚೈತನ್ಯಗೂ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸರು!

    ಹೈದರಾಬಾದ್​: ಸರ್ಕಾರದಿಂದ ಭದ್ರತಾ ಪಡೆದವರನ್ನು ಹೊರತುಪಡಿಸಿ ಯಾರೊಬ್ಬರು ಕಾರಿನ ಗಾಜಿನ ಮೇಲೆ ಕಪ್ಪು ಸ್ಕ್ರೀನ್​ ಅಳವಡಿಸಿರಬಾರದು ಎಂದು ಸುಪ್ರೀಂಕೋರ್ಟ್​ ಇತ್ತೀಚೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಹೈದರಾಬಾದ್​ ಸಂಚಾರಿ ಪೊಲೀಸರು ಕಾರ್ಯಪ್ರವೃತರಾಗಿದ್ದಾರೆ. ವಿವಿಐಪಿ, ಸೆಲೆಬ್ರಿಟಿಗಳೆನ್ನದೆ ಕಪ್ಪು ಸ್ಕ್ರೀನ್​ ಅಳವಡಿಸಿದವರನ್ನು ತಡೆದು ದಂಡ ವಿಧಿಸುತ್ತಿದ್ದಾರೆ.

    ಪೊಲೀಸರ ತಪಾಸಣೆ ವೇಳೆ ಈಗಾಗಲೇ ಅಲ್ಲು ಅರ್ಜುನ್​, ಕಲ್ಯಾಣ್​ ರಾಮ್​, ಮಂಚು ಮನೋಜ್​ ಹಾಗೂ ತ್ರಿವಿಕ್ರಮ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ದಂಡದ ಬಿಸಿ ತಟ್ಟಿದೆ. ಅಲ್ಲದೆ, ಕಪ್ಪು ಸ್ಕ್ರೀನ್​ಗಳನ್ನು ಕಳಚಿದ್ದಾರೆ. ಇದೀಗ ಆ ಸಾಲಿಗೆ ಸಮಂತಾ ಮಾಜಿ ಪತಿ ಹಾಗೂ ನಟ ನಾಗಚೈತನ್ಯ ಸೇರಿಕೊಂಡಿದ್ದಾರೆ.

    ಇತ್ತೀಚೆಗೆ ಪೊಲೀಸ್​ ತಪಾಸಣೆ ವೇಳೆ ನಾಗಚೈತನ್ಯ ಅವರು ಕಾರು ಸಿಕ್ಕಿಬಿದ್ದಿತು. ಈ ವೇಳೆ ಕಾರಿನ ಗಾಜಿನಲ್ಲಿದ್ದ ಕಪ್ಪು ಸ್ಕ್ರೀನ್​ ಅನ್ನು ತೆಗೆಸಿದ ಪೊಲೀಸರು 700 ರೂಪಾಯಿ ದಂಡವನ್ನು ವಿಧಿಸಿದರು. ಈ ಸಂದರ್ಭದಲ್ಲಿ ನಾಗಚೈತನ್ಯ ಕಾರಿನಲ್ಲೇ ಇದ್ದರು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪೊಲೀಸರ ಕರ್ತವ್ಯಕ್ಕೆ ನೆಟ್ಟಿಗರು ಸಲಾಂ ಹೊಡೆದಿದ್ದಾರೆ. (ಏಜೆನ್ಸೀಸ್​)

    ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್​!

    ಮೈಸೂರು-ನಂ.ಗೂಡು ಹೆದ್ದಾರೀಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ: ಬೆಚ್ಚಿಬಿದ್ದ ಸ್ಥಳೀಯರು

    4ನೇ ಅಲೆ ತಡೆಗೆ ಬಿಗಿಬಲೆ: ದೇಶದ ಹಲವೆಡೆ ಸೋಂಕು ಹೆಚ್ಚಳ; ಸರ್ಕಾರ ಹೈ-ಅಲರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts