ಒಂದು ಕಪ್​ ಟೀಗಾಗಿ ಆಹ್ವಾನ! ಸೋನಿಯಾ ಗಾಂಧಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಕೊಟ್ರು ಮಹತ್ವದ ಸುಳಿವು

blank

ನವದೆಹಲಿ: ಕಳೆದ ಏಪ್ರಿಲ್​-ಮೇನಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತು ಟಿಎಂಸಿ ಎದುರಾಳಿಗಳಾಗಿ ಸ್ಪರ್ಧಿಸಿದ ಬಳಿಕ ಇದೇ ಮೊದಲ ಬಾರಿಗೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿರುವುದು ಭಾರೀ ಕುತೂಹಲ ಸೃಷ್ಟಿಸಿದೆ.

ಭೇಟಿಯ ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಉಪಸ್ಥಿತರಿದ್ದರು ಎಂಬ ಮಾಹಿತಿ ಇದೆ. ಮತ್ತೊಮ್ಮೆ ಒಗ್ಗಟ್ಟಿನ ಮಂತ್ರ ಜಪಿಸಿರುವ ಉಭಯ ನಾಯಕರು, ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮಣಿಸಲು ಮತ್ತೆ ಒಂದಾಗಲು ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ.

ಭೇಟಿಯ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ಸೋನಿಯಾ ಅವರು ಒಂದು ಕಪ್​ ಟೀಗಾಗಿ ಆಹ್ವಾನಿಸಿದ್ದರು. ಇದೇ ವೇಳೆ ರಾಹುಲ್​ ಗಾಂಧಿ ಸಹ ಇದ್ದರು. ದೇಶದಲ್ಲಿನ ಕೋವಿಡ್​ ಪರಿಸ್ಥಿತಿ ಮತ್ತು ಇಸ್ರೇಲಿ ಬೇಹುಗಾರಿಕಾ ಸಾಫ್ಟ್​ವೇರ್​ ಪೆಗಾಸಸ್​ ಬಗ್ಗೆ ನಾವು ಚರ್ಚಿಸಿದ್ದೇವೆ. ಪ್ರತಿಪಕ್ಷಗಳ ಒಗ್ಗೂಡುವಿಕೆ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ. ಇದೊಂದು ಒಳ್ಳೆಯ ಹಾಗೂ ಧನಾತ್ಮಕ ಭೇಟಿ ಆಗಿತ್ತು. ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಗ್ಗೂಡಬೇಕಿದೆ ಮತ್ತು ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಅಂದಹಾಗೆ ಬಂಗಾಳದ ಸಿಎಂ ಐದು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಕಮಲ್​ ನಾಥ್​ ಮತ್ತು ಆನಂದ್​ ಶರ್ಮಾರಂತಹ ಹಿರಿಯ ಕಾಂಗ್ರೆಸ್​ ನಾಯಕರನ್ನು ಮಮತಾ ಬ್ಯಾನರ್ಜಿ ಅವರು ಮಂಗಳವಾರ ಭೇಟಿ ಆಗಿದ್ದಾರೆ. ಸೋನಿಯಾ ಮತ್ತು ರಾಹುಲ್​ ಗಾಂಧಿಯ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ರನ್ನು ಭೇಟಿ ಮಾಡಿ ಮಮತಾ ಮಾತುಕತೆ ನಡೆಸಿದ್ದಾರೆ.

ದೀದಿ ಆಗ್ತಾರಾ ಮುಂದಿನ ಪ್ರಧಾನಿ ಅಭ್ಯರ್ಥಿ?
ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ವಿಜಯ ಸಾಧಿಸಿದ ಬಳಿಕ ಮಮತಾ ಬ್ಯಾನರ್ಜಿ ಅವರ ವರ್ಚಸ್ಸು ಇಮ್ಮಡಿಯಾಗಿದೆ. ಅದರಲ್ಲೂ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ವಿರೋಧಿ ಪಾಳಯದ ಪ್ರಮುಖ ಶಕ್ತಿಯಾಗಿ ಮಮತಾ ಅವರು ಹೊರಹೊಮ್ಮಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಯಾಗುತ್ತಿದೆ. (ಏಜೆನ್ಸೀಸ್​)

ಮುಂದಿನ ವರ್ಷ 3ನೇ ತ್ರೈಮಾಸಿಕದಲ್ಲಿ ಚಂದ್ರಯಾನ 3; ಸಂಸತ್ತಿನಲ್ಲಿ ಉತ್ತರಿಸಿದ ಸಚಿವ

ದಿನಕ್ಕೆ 70 ಸಾವಿರ ರೂಪಾಯಿ ಆಫರ್: ರಾಜ್​ ಕುಂದ್ರಾ ಕಂಪನಿ​ಯ ಕರಾಳತೆ ಬಿಚ್ಚಿಟ್ಟ ಮಾಡೆಲ್​!

ಬೆಳ್ಳಿ ಗೆದ್ದರೂ ಖುಷಿ ಪಡದೆ ಅಳುತ್ತಾ, ಕ್ಷಮೆ ಕೇಳಿದ ಕ್ರೀಡಾಪಟುಗಳು! 17 ವರ್ಷಗಳ ದಾಖಲೆ ಮುರಿದುಬಿತ್ತು!

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…