ತಿರುವಳ್ಳೂರು: ನಾಲ್ಕು ದಿನಗಳ ಹಿಂದಷ್ಟೇ ಮದುವೆ ಆಗಿದ್ದ ನವಜೋಡಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಅರಕ್ಕೊಣಮ್ ಮೂಲದ ಮನೋಜ್ ಕುಮಾರ್ (31) ಮತ್ತು ಪೆರುಗಲಥೂರ್ ಮೂಲದ ಕಾರ್ತಿಕಾ (30) ಮೃತ ದಂಪತಿ. ಕಾಂಕ್ರಿಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.
ಮನೋಜ್ ಕುಮಾರ್ ಅವರು ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು. ಕಾರ್ತಿಕಾ ಖಾಸಗಿ ಕ್ಲೀನಿಕ್ ಒಂದರಲ್ಲಿ ವೈದ್ಯೆ ಆಗಿದ್ದರು. ಅಕ್ಟೋಬರ್ 28ರಂದು ಇಬ್ಬರು ಮದುವೆ ಆಗಿದ್ದರು. ಭಾನುವಾರ ಕಾರ್ತಿಕಾ ಮನೆಗೆ ಹೋಗಿ ಅರಕ್ಕೊಣಮ್ಗೆ ಹಿಂದಿರುಗುತ್ತಿದ್ದರು.
ಪೂನಮೆಲೀ-ಅರಕ್ಕೊಣಮ್ ಹೆದ್ದಾರಿ ನಡುವಿನ ಕಡಂಬಥೂರ್ ಸಮೀಪ ಭಾನುವಾರ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎದರಿನಿಂದ ಬಂದ ಕಾಂಕ್ರಿಟ್ ಮಿಕ್ಸರ್ ಲಾರಿ ತಿರುವ ಪಡೆಯಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮಿಕ್ಸರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಘಟನೆ ನಡೆದ ಎರಡು ಗಂಟೆಯ ನಂತರ ಮಿಕ್ಸರ್ ಲಾರಿಯನ್ನು ತೆರವುಗೊಳಿಸಲಾಯಿತು. ಇದರ ಬೆನ್ನಲ್ಲೇ ಸ್ಥಳಕ್ಕೆ ಆಂಬ್ಯುಲೆನ್ಸ್ ದೌಡಾಯಿಸಿತು. ಆದರೆ, ಅಷ್ಟರಲ್ಲಾಗಲೇ ದಂಪತಿ ಸಾವಿಗೀಡಾಗಿದ್ದರು. ಮೃತದೇಹಗಳನ್ನು ವಶಕ್ಕೆ ಪಡೆದ ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಯ ಬೆನ್ನಲ್ಲೇ ಮಿಕ್ಸರ್ ಲಾರಿ ಡ್ರೈವರ್ ಎಸ್ಕೇಪ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡ್ರೈವರ್ಗಾಗಿ ಬಲೆ ಬೀಸಿದ್ದಾರೆ. (ಏಜೆನ್ಸೀಸ್)
ತಮಿಳು ನಟ ವಿಶಾಲ್ ಬೆನ್ನಲ್ಲೇ ಅಪ್ಪು ನೆನಪಲ್ಲಿ ಮಹತ್ವದ ಕಾರ್ಯಕ್ಕೆ ಮುಂದಾದ ನಟಿ ಪ್ರಣೀತಾ!
ಹುಬ್ಬೇರಿಸುವಂತಿದೆ ಸಲಿಂಗಕಾಮಿ ಜೋಡಿ ಮದುವೆ ಕುರಿತು ಸಮಂತಾ ಮಾಡಿರುವ ಪೋಸ್ಟ್..!
ದಲಿತನ ಮದ್ವೆಯಾದೆನೆಂದು ತಂದೆಯೇ ಅರೆನಗ್ನಗೊಳಿಸಿದರು… ಕರಾಳ ಘಟನೆ ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ…