ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಬೆಂಬಲಿಗರ ನಡುವೆ ಸದಾಶಿವನಗರ ಗೆಸ್ಟ್ ಹೌಸ್ ಬಳಿ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ
ಸದಾಶಿವನಗರ ಗೆಸ್ಟ್ ಹೌಸ್ ಬಳಿ ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ತೆರಳಿದ್ದರು. ಇದೇ ವೇಳೆ ಜಮೀರ್ ಬೆಂಬಲಿಗರು ಕೂಡ ಗೆಸ್ಟ್ ಹೌಸ್ ಬಳಿ ಜಮಾವಣೆಗೊಂಡಿದ್ದರು. ಈ ವೇಳೆ ಇಬ್ಬರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆ ನಡೆದಿದೆ.
ಗೆಸ್ಟ್ ಹೌಸ್ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೆಸ್ಟ್ಹೌಸ್ ಬಳಿ ತೆರಳಿದ ನಿಖಿಲ್ ಕುಮಾರಸ್ವಾಮಿಯ ಮೂವರು ಬಾಡಿ ಗಾರ್ಡ್ಗಳು ಗೆಸ್ಟ್ ಹೌಸ್ ನಮ್ಮದು ಎಂದು ಕೇರ್ಟೇಕರ್ನನ್ನು ಓಡಿಸಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಆದರೆ, ಗೆಸ್ಟ್ ಹೌಸ್ ನಮ್ಮದು ಅಂತಾ ಜಮೀರ್ ಪಿಎ ಫಾರೂಕ್ ಠಾಣೆಗೆ ದೌಡಾಯಿಸಿದ್ದಾರೆ.
ಸದ್ಯ ಪ್ರಕರಣ ಸದಾಶಿವನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ. (ದಿಗ್ವಿಜಯ ನ್ಯೂಸ್)
VIDEO| ಕರ್ತವ್ಯದ ನಡುವೆಯೇ ಡುಯೆಟ್ ಸಾಂಗ್! ಪೊಲೀಸ್ ಸಿಬ್ಬಂದಿಗೆ ಎದುರಾಯ್ತು ಸಂಕಷ್ಟ
ಬಾಕ್ಸಿಂಗ್ ದಿಗ್ಗಜ ಮೊಹಮದ್ ಅಲಿ ಅವರ ಸ್ಮರಣಾರ್ಥ ಅಭಿಮಾನಿಗಳಿಂದ ಸಿದ್ಧವಾಗಿದೆ ಕಿರುಚಿತ್ರ