More

    ಧನುಷ್​-ಐಶ್ವರ್ಯಾ ನಡುವೆ ನಡೆಯುತ್ತಿತ್ತು ಜಗಳ: ಡಿವೋರ್ಸ್​ಗೆ ಅಸಲಿ ಕಾರಣ ಬಿಚ್ಚಿಟ್ಟ ಸ್ನೇಹಿತರು!

    ಚೆನ್ನೈ: ಕಾಲಿವುಡ್​ನ ಸ್ಟಾರ್​ ದಂಪತಿಗಳೆಂದೇ ಖ್ಯಾತರಾಗಿರುವ ನಟ ಧನುಷ್​ ಮತ್ತು ಸೂಪರ್​ಸ್ಟಾರ್​ ರಜಿನಿಕಾಂತ್​ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ ನಿನ್ನೆ (ಜ.17) ಏಕಾಏಕಿ ಗುಡ್​ ಬೈ ಹೇಳಿರುವುದು ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಆಘಾತವಾಗಿದೆ. ತುಂಬಾ ಅನೋನ್ಯವಾಗಿದ್ದ ಸ್ಟಾರ್​ ಜೋಡಿಯ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣ ಏನಿರಬಹುದೆಂಬ ಪ್ರಶ್ನೆಯೇ ಈಗ ಎಲ್ಲೆಡೆ ಕೇಳಿಬರುತ್ತಿದೆ.

    ಬರೋಬ್ಬರಿ ಆರು ತಿಂಗಳು ಧನುಷ್​ ಮತ್ತು ಐಶ್ವರ್ಯಾ ಪರಸ್ಪರ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಡಿವೋರ್ಸ್​ ನಿರ್ಧಾರದ ಹಿಂದೆ ಯಾವುದೇ ವೈಯಕ್ತಿಕ ದ್ವೇಷವಾಗಲಿ ಅಥವಾ ಕೌಟುಂಬಿಕ ಕಲಹಗಳಾಗಲಿ ಇರಲಿಲ್ಲ ಎಂದು ಸ್ಟಾರ್​ ಜೋಡಿಯ ಸ್ನೇಹ ಬಳಗ ತಿಳಿಸಿದೆ.

    ಹಾಗದರೆ, ಡಿವೋರ್ಸ್​ಗೆ ಕಾರಣ ಏನಿರಬಹುದು ಎಂದು ನೋಡಿದರೆ, ಧನುಷ್​ ಅವರ ಕೆಲಸದ ಸ್ವಭಾವವೇ ಕಾರಣ ಎಂದು ಸ್ನೇಹಿತರು ಹೇಳುತ್ತಿದ್ದಾರೆ. ಸಿನಿಮಾವೇ ತನ್ನ ಸರ್ವಸ್ವ ಎಂದು ಭಾವಿಸಿರುವ ಧನುಷ್​, ಕುಟುಂಬಕ್ಕೆ ಸಮಯ ನೀಡುತ್ತಿರಲಿಲ್ಲ. ಇದೇ ವಿಚಾರಕ್ಕೆ ಐಶ್ವರ್ಯಾ ಜತೆ ಜಗಳವು ನಡೆಯುತ್ತಿತ್ತು. ಆದರೆ, ಜಗಳದ ನಂತರವೂ ಧನುಷ್​ ಹೊಸ ಚಿತ್ರಗಳಿಗೆ ಸಹಿ ಹಾಕುತ್ತಿದ್ದರು ಎಂದು ಸ್ನೇಹಿತರೊಬ್ಬರು ಹೇಳಿದ್ದಾರೆ.

    ಧನುಷ್ ಅವರು ಸಿನಿಮಾಗಳನ್ನು ತಪ್ಪಿಸಿಕೊಳ್ಳುವ ಮಾಧ್ಯಮವಾಗಿ ಬಳಸಿಕೊಂಡರು. ಏಕೆಂದರೆ, ಅಂತರ್ಮುಖಿಯಾಗಿರುವ ಅವರಿಗೆ ತನ್ನ ಸಮಸ್ಯೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುವುದು ತುಂಬಾ ಕಷ್ಟಕರವಾಗಿತ್ತು. ಹೀಗಾಗಿಯೇ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

    ಜ. 17 ರಂದು ಟ್ವೀಟ್​ ಮೂಲಕ ಡಿವೋರ್ಸ್​ ಖಚಿತಪಡಿಸಿರುವ ಧನುಷ್​, ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಧನುಷ್​ ಟ್ವೀಟ್​ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ನಮ್ಮ ನಿರ್ಧಾರವನ್ನು ಗೌರವಿಸಿ, ನಮಗೆ ಬೇಕಾಗಿರುವ ಖಾಸಗಿತನವನ್ನು ನೀಡಿ ಎಂದಿದ್ದಾರೆ. ಐಶ್ವರ್ಯಾ ಕೂಡ ಹೇಳಿಕೆಯನ್ನು ನೀಡಿದ್ದು, ಹೆಚ್ಚಿಗೆ ಹೇಳುವ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಜನರಲ್ಲಿ ಕೋರಿದ್ದಾರೆ.

    ಐಶ್ವರ್ಯಾ ಮತ್ತು ಧನುಷ್​ 2004ರ ನವೆಂಬರ್​ 18ರಂದು ಮದುವೆಯಾದರು. ವಿವಾಹಕ್ಕೂ ಮುನ್ನ ದಂಪತಿ 6 ತಿಂಗಳು ಡೇಟಿಂಗ್​ ನಡೆಸಿದ್ದರು. ದಂಪತಿಗಳಿಗೆ ಯಾತ್ರ ಮತ್ತು ಲಿಂಗ ಹೆಸರಿನ ಇಬ್ಬರು ಗಂಡು ಮಕ್ಕಳಿದ್ದಾರೆ. (ಏಜೆನ್ಸೀಸ್​)

    ಲಾಲ್ ಸಿಂಗ್ ಮುಂದೂಡಿಕೆ?; ಕೆಜಿಎಫ್​ಗೆ ಹೆದರಿ ಮುಂದೆ ಹೋಗುವ ಸಾಧ್ಯತೆ

    ಕನ್ನಡಕ್ಕೆ ಶಾಸ್ತ್ರೀಯ ಅವಮಾನ!: ಸ್ಥಾನಮಾನದ ಲಾಭ ಪಡೆಯದ ಸರ್ಕಾರಗಳು; ಮೀನಮೇಷದಲ್ಲೇ 15 ವರ್ಷ

    ಸೊಸೈಟಿಗಳಲ್ಲಿ ಕಪ್ಪು-ಬಿಳುಪು ದಂಧೆ!: ದಿವಾಳಿ ಸಂಘಗಳಲ್ಲಿ ನಡೆಯುತ್ತಿದೆ ಬ್ಲ್ಯಾಕ್ ಆ್ಯಂಡ್ ವೈಟ್ ಹಣದ ವ್ಯವಹಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts