ಮುಂಬೈ: ಅಪಘಾತದ ಸ್ಥಳದಿಂದ ಗಾಯಾಳುಗಳನ್ನು ಸಾಗಿಸಲು ಆಂಬ್ಯುಲೆನ್ಸ್ ನಿಲ್ಲಿಸಿಕೊಂಡು ಸಿದ್ಧತೆ ನಡೆಸುವಾಗಲೇ ವೇಗವಾಗಿ ಬಂದ ಕಾರೊಂದು ನಿಂತಿದ್ದ ಆಂಬ್ಯುಲೆನ್ಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ದುರಂತ ಸಾವಿಗೀಡಾಗಿರುವ ಘಟನೆ ಮುಂಬೈನ ಬಾಂದ್ರಾ-ವೊರ್ಲಿ ಸಮುದ್ರ ಸಂಪರ್ಕ (ಸೀ ಲಿಂಕ್) ರಸ್ತೆಯಲ್ಲಿ ನಡೆದಿದೆ.
ಈ ಅಪಘಾತ ಬುಧವಾರ ಬೆಳಗ್ಗೆ 3.30ರ ಸುಮಾರಿಗೆ ನಡೆದಿದೆ. ಇದಕ್ಕೂ ಮುನ್ನ ನಡೆದಿದ್ದ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಾಗಿಸಲು ಆಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿತ್ತು. ಅದೇ ಸ್ಥಳದಲ್ಲಿ ಇತರೆ ವಾಹನಗಳು ಸಹ ಇದ್ದವು. ರಸ್ತೆ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿ, ಗಾಯಾಳುಗಳನ್ನು ಆಂಬ್ಯುಲೆನ್ಸ್ ಒಳಗೆ ಸಾಗಿಸಿ, ಆಸ್ಪತ್ರೆಗೆ ದಾಖಲಿಸಲು ತಯಾರಿ ನಡೆಸುವಾಗ ಕಾರು ಬಂದು ಡಿಕ್ಕಿ ಹೊಡೆದಿದೆ.
ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿಯು ಸೆರೆಯಾಗಿದೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಓರ್ವ ಮಹಿಳೆ ಹಾಗೂ ಸೀ ಲಿಂಕ್ ಉದ್ಯೋಗಿ ಸೇರಿದಂತೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮುಂಬೈನ ಬಾಂದ್ರಾ-ವೊರ್ಲಿ ಸೀ ಲಿಂಕ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ. (ಏಜೆನ್ಸೀಸ್)
ತುಮಕೂರಲ್ಲಿ ಹಾಡಹಗಲೇ ಕುಡಿದ ಮತ್ತಿನಲ್ಲಿ ನಾಗರಹಾವನ್ನ ಕೈಗೆ ಸುತ್ತಿಕೊಂಡು ಓಡಾಡಿದ ಯುವಕ! ಮುಂದೇನಾಯ್ತು?
ಸಂಭ್ರಮದ ಹಿಂದೆಯೇ ಬಂದೆರಗಿದ ಸಾವು! ಬಾಲ್ಯದ ಕನಸು ನನಸಾದ ಖುಷಿಯಲ್ಲಿದ್ದಾಗಲೇ ಯುವಕನಿಗೆ ಹೃದಯಾಘಾತ
ಪಿಎಫ್ಐ ಜತೆ 873 ಪೊಲೀಸ್ ಅಧಿಕಾರಿಗಳ ನಂಟು! ಆತಂಕಕಾರಿ ವಿಷಯ ಎನ್ಐಎ ತನಿಖೆಯಿಂದ ಬಯಲು