ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇಂತಹ ಸಂದರ್ಭದಲ್ಲಿ ವಾಹನ ಚಾಲಕರು ತುಂಬಾ ಜಾಗರೂಕರಾಗಿ ವಾಹನಗಳನ್ನು ಚಲಾಯಿಸಬೇಕಾದ ಅನಿವಾರ್ಯತೆ ಇದೆ. ಇಲ್ಲವಾದಲ್ಲಿ ಅಪಾಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ.
ತುಮಕೂರಿನ ಪಾವಗಡದಲ್ಲಿ ಮತ್ತೊಂದು ಬಸ್ ದುರಂತ ಸ್ವಲ್ಪದರಲ್ಲೇ ತಪ್ಪಿದೆ. ರಭಸವಾಗಿ ಹರಿಯುವ ನೀರಿನಲ್ಲಿ ಖಾಸಗಿ ಬಸ್ ಒಂದು ಸಿಲುಕಿದ ಘಟನೆ ಪಾವಗಡ ತಾಲೂಕಿನ ಹಿಂದೂಪುರ ಮಾರ್ಗ ಮಧ್ಯೆ ನಡೆದಿದೆ.
ಧಾರಾಕಾರ ಮಳೆಯಿಂದಾಗಿ ವೆಂಕಟಾಪುರ ಬಳಿಯಿರುವ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ಹೀಗಿದ್ದರೂ ಜಾಗರೂಕತೆ ವಹಿಸಬೇಕಿದ್ದ ಚಾಲಕ, ಹಿಂದು-ಮುಂದು ಯೋಚಿಸಿದೆ ಸೇತುವೆ ಮೇಲೆಯೇ ಬಸ್ ಚಲಾಯಿಸಿಕೊಂಡು ಹೋಗಿದ್ದಾನೆ. ಪರಿಣಾಮ ಬಸ್ ಸೇತುವೆ ನಡುವೆಯೇ ಬಸ್ ಸಿಲುಕಿತು.
ಹಿಂದೂಪುರದಿಂದ ವೆಂಕಟಾಪುರ ಮಾರ್ಗವಾಗಿ ಪಾವಗಡಕ್ಕೆ ಬಸ್ ಬರುತ್ತಿತ್ತು. ಸೇತುವೆ ಮೇಲಿನ ನೀರಿನ ರಭಸಕ್ಕೆ ಬಸ್ ಮುಂದೆ ಸಾಗದೆ ಅಲ್ಲಿಯೇ ನಿಂತಿತು. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ತುಂಬಿದ್ದರು. ವೆಂಕಟಾಪುರ ಗ್ರಾಮಸ್ಥರು ಹಗ್ಗದ ಸಹಾಯದಿಂದ ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.
ಮತ್ತೊಂದು ಖಾಸಗಿ ಬಸ್ ಸಹಾಯದಿಂದ ಸೇತುವೆ ಮೇಲೆ ಸಿಲುಕಿದ್ದ ಬಸ್ ಅನ್ನು ಗ್ರಾಮಸ್ಥರು ಹೊರಕ್ಕೆ ತೆಗೆದಿದ್ದಾರೆ. ಚಾಲಕ ಬಸ್ ಚಲಾಯಿಸಿಕೊಂಡು ಇನ್ನು ಸ್ವಲ್ಪ ಮುಂದೆ ಹೋಗಿದ್ದರೆ, ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ದುರಂತವೊಂದು ತಪ್ಪಿದೆ. ಹಿಂದೊಮ್ಮೆ ಪಾವಡಗದಲ್ಲಿ ಬಸ್ ಪಲ್ಟಿಯಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟು, ಸಾಕಷ್ಟು ಜನರು ಗಂಭೀರವಾಗಿ ಗಾಯಗೊಂಡಿದ್ದರು. (ದಿಗ್ವಿಜಯ ನ್ಯೂಸ್)
ರಷ್ಯಾ-ಯೂಕ್ರೇನ್ ಬೆನ್ನಲ್ಲೇ ಚೀನಾ-ತೈವಾನ್ ಯುದ್ಧ ಭೀತಿ: ತೈವಾನ್ ಸುತ್ತ ಸೇನಾ ಚಟುವಟಿಕೆ ಆರಂಭಿಸಿದ ಚೀನಾ
ಸ್ವಾತಂತ್ರ್ಯ ಸಂಭ್ರಮಕ್ಕೆ ಉಗ್ರರ ಕರಿನೆರಳು: ಇಂಟೆಲಿಜೆನ್ಸ್ ಬ್ಯೂರೋದಿಂದ ದೆಹಲಿ ಪೊಲೀಸರಿಗೆ ಎಚ್ಚರಿಕೆ ಸಂದೇಶ
ಅನೈತಿಕ ಸಂಬಂಧಕ್ಕೆ ಶಿಕ್ಷಕಿ ಬಲಿ: 6 ತಿಂಗಳ ಬಳಿಕ ಆರೋಪಿಗಳ ಹೆಡೆಮುರಿ ಕಟ್ಟಿದ ನಂಜನಗೂಡು ಪೊಲೀಸರು