More

    ವಿವಾದವನ್ನೇ ಬಂಡವಾಳ ಮಾಡಿಕೊಂಡ್ರಾ ಪವಿತ್ರಾ ಲೋಕೇಶ್​? ಟಾಲಿವುಡ್​ನಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ!

    ಹೈದರಾಬಾದ್​: ಪೋಷಕ ಪಾತ್ರಗಳಿಂದ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ನಟಿ ಪವಿತ್ರಾ ಲೋಕೇಶ್ ಅವರು ಇತ್ತೀಚೆಗೆ ನಟ ನರೇಶ್​ ಜತೆಗಿನ ಸಂಬಂಧದ ವಿಚಾರದಲ್ಲಿ ಭಾರಿ ವಿವಾದವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

    ಈಗಾಗಲೇ ನರೇಶ್​ ಕುಟುಂಬದ ಜಗಳ ಬೀದಿಗೆ ಬಂದಿರುವುದು ಎಲ್ಲರಿಗೂ ತಿಳಿದಿದೆ. ಪವಿತ್ರಾ ಲೋಕೇಶ್​ ಮತ್ತು ನಟ ನರೇಶ್​ ನಡುವೆ ಅಕ್ರಮ ಸಂಬಂಧ ಇದೆ ಎಂದು ನರೇಶ್​ ಅವರ ಮೂರನೇ ಪತ್ನಿ ರಮ್ಯಾ ಆರೋಪ ಮಾಡಿದ್ದಾರೆ. ನರೇಶ್​ ತೆಲುಗು ಸೂಪರ್​ ಸ್ಟಾರ್​ ಕೃಷ್ಣ ಅವರ ಮಲ ಮಗ. ಕೃಷ್ಣ ಅವರು ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ತಂದೆ. ನರೇಶ್​ ಮತ್ತು ಪವಿತ್ರಾ ಇಬ್ಬರು ಮದುವೆ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ನಡುವೆ ನನಗೆ ವಂಚಿಸಿದ್ದಾರೆ ಮತ್ತು ಸಾಕಷ್ಟು ಕಿರುಕುಳ ನೀಡಿದ್ದಾರೆಂದು ರಮ್ಯಾ, ನರೇಶ್​ ವಿರುದ್ಧ ಆರೋಪ ಮಾಡಿದ್ದಾರೆ.

    ಅದಕ್ಕೆ ಪುಷ್ಠಿ ನೀಡುವಂತೆ ಮೈಸೂರು ಇದೇ ತಿಂಗಳ ಆರಂಭದಲ್ಲಿ ಅಂದರೆ, ಜುಲೈ 2ರಂದು ರಾತ್ರಿ ವಿವಿ ಪುರಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿ, ಹೋಟೆಲ್​ ಒಂದರಲ್ಲಿ ಒಂದೇ ಕೋಣೆಯಲ್ಲಿ ನರೇಶ್​ ಮತ್ತು ಪವಿತ್ರ ಲೋಕೇಶ್​ ಉಳಿದುಕೊಂಡಿದ್ದರು. ಇಡೀ ರಾತ್ರಿ ಒಂದೇ ರೂಮಿನಲ್ಲಿ ಇದ್ದರು. ಈ ವಿಚಾರ ರಮ್ಯಾ ಅವರಿಗೆ ತಿಳಿದು ಹೋಟೆಲ್​ಗೆ ಬಂದು ಜಗಳವಾಡಿದ್ದರು. ಇದು ಭಾರೀ ಸುದ್ದಿಯಾಗಿತ್ತು. ಇಬ್ಬರ ನಡುವಿನ ಸಂಬಂಧಕ್ಕೆ ಮೈಸೂರಿನ ಘಟನೆ ಸಾಕ್ಷಿಯಾಗಿತ್ತು.

    ಇಡೀ ವಿವಾದದ ಕೇಂದ್ರ ಬಿಂದು ಪವಿತ್ರಾ ಲೋಕೇಶ್​ ಎಂಬುದು ಎಲ್ಲರಿಗೂ ಗೊತ್ತಿದೆ. ಒಂದು ತಿಂಗಳು ಪವಿತ್ರಾ ಅವರಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಕ್ಕಿತು. ಇದೀಗ ಇದನ್ನೇ ಬಂಡವಾಳ ಮಾಡಿಕೊಂಡಿರುವ ಪವಿತ್ರಾ, ತಮ್ಮ ಸಂಭಾವನೆಯನ್ನು ಏರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ಒಂದು ದಿನದ ಶೂಟಿಂಗ್​​​ಗೆ 50 ರಿಂದ 70 ಸಾವಿರ ಚಾರ್ಜ್​ ಮಾಡುತ್ತಿದ್ದ ಪವಿತ್ರಾ, ಇದೀಗ ತಮ್ಮ ಸಂಭಾವನೆಯನ್ನು ಏರಿಸಿಕೊಂಡಿದ್ದಾರೆ ಎಂಬ ಮಾತುಗಳು ಟಾಲಿವುಡ್​ ಗಲ್ಲಿಯಲ್ಲಿ ಕೇಳಿಬರುತ್ತಿದೆ.

    ಇತ್ತೀಚೆಗೆ ಬಿಡುಗಡೆಯಾದ ರವಿತೇಜ ನಟನೆಯ ರಾಮರಾವ್ ಆನ್ ಡ್ಯೂಟಿ ಸಿನಿಮಾದ ಒಂದು ನಿರ್ದಿಷ್ಟ ದೃಶ್ಯದಲ್ಲಿ ಪವಿತ್ರ ಲೋಕೇಶ್ ಮತ್ತು ನರೇಶ್​ ಇಬ್ಬರನ್ನು ಒಟ್ಟಿಗೆ ಪರದೆಯ ಮೇಲೆ ನೋಡಿದ ಪ್ರೇಕ್ಷಕರು, ಆ ಬಗ್ಗೆ ಹೆಚ್ಚು ಚರ್ಚಿಸ ತೊಡಗಿದ್ದು, ಇದು ಕೂಡ ಸಿನಿಮಾಗೆ ಧನಾತ್ಮಕ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಇದನ್ನು ನೋಡಿ ಪವಿತ್ರಾ ಅವರು ತನ್ನ ಹೊಸ ಕ್ರೇಜ್ ಅನ್ನು ಅರ್ಥಮಾಡಿಕೊಂಡಂತೆ ತೋರುತ್ತಿದ್ದು, ಅದಕ್ಕೆ ತಕ್ಕಂತೆ ಸಂಭಾವನೆ ಏರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಅದರಲ್ಲೂ ನರೇಶ್​ ಜೊತೆ ಕಾಣಿಸಿಕೊಳ್ಳುವ ದೃಶ್ಯಗಳಿಗೆ ಇನ್ನು ಹೆಚ್ಚಿನ ಸಂಭಾವನೆ ಪಡೆಯುತ್ತಾರೆ ಎಂಬ ಮಾತುಗಳು ಸಹ ಕೇಳಿಬಂದಿದೆ. ಒಟ್ಟಿನಲ್ಲಿ ವಿವಾದದ ಬಳಿಕ ಅದನ್ನೇ ಬಂಡವಾಳ ಮಾಡಿಕೊಂಡಿರುವ ಪವಿತ್ರಾ ಅವರು ಸಂಭಾವನೆ ಏರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯ ಎಂಬುದನ್ನು ಸ್ವತಃ ಪ್ರವಿತ್ರಾ ಅವರೇ ತಿಳಿಸಬೇಕಿದೆ. (ಏಜೆನ್ಸೀಸ್​)

    VIDEO| ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿರುವ TRS ಪಕ್ಷದ ಈ ಸಾಂಗ್ ವೈರಲ್ ಆಗ್ತಿದೆ!

    ರಾಮು-ಮಾಲಾಶ್ರೀ ಮಗಳು ಚಿತ್ರರಂಗಕ್ಕೆ; ರಾಕ್​ಲೈನ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಧನಾ ನಾಯಕಿ..

    ಇಂದಿನಿಂದ ಬಿಗ್ ಬಾಸ್ ಓಟಿಟಿ; ವೂಟ್ ಸೆಲೆಕ್ಟ್​ನಲ್ಲಿ ರಾತ್ರಿ 7ಕ್ಕೆ ಗ್ರಾಂಡ್ ಪ್ರೀಮಿಯರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts