More

    ಬೆಂಗಾವಲು ವಾಹನ ನಿಲ್ಲಿಸಿ ಆಂಬ್ಯುಲೆನ್ಸ್​ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ! ವಿಡಿಯೋ ವೈರಲ್​

    ಅಹಮದಾಬಾದ್​: ತವರು ಭೂಮಿ ಗುಜರಾತಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದು, ಇದರ ನಡುವೆ ತಮ್ಮ ಮಾನವೀಯ ಗುಣದಿಂದ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ಶುಕ್ರವಾರ ಪ್ರಧಾನಿ ಮೋದಿ ಅವರು ಅಹಮದಾಬಾದ್​ನಿಂದ ಗಾಂಧಿನಗರ ಕಡೆ ಹೊರಟಿದ್ದಾಗ ಮಾರ್ಗ ಮಧ್ಯೆ ತಮ್ಮ ಬೆಂಗಾವಲು ವಾಹವನ್ನು ನಿಲ್ಲಿಸಿ, ಆಂಬ್ಯುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು. ಈ ಮೂಲಕ ವಿವಿಐಪಿ ಸಂಸ್ಕೃತಿಯನ್ನು ಬದಿಗಿಟ್ಟು, ಮಾನವೀಯತೆಗಿಂತ ದೊಡ್ಡದು ಯಾವುದು ಇಲ್ಲ ಎಂಬ ಸಂದೇಶವನ್ನು ಸಾರಿದರು.

    ಈ ಹಿಂದೆ 2017ರಲ್ಲಿ ಪ್ರಧಾನಿ ಮೋದಿ ಅವರು ವಿಐಪಿ ಬದಲಿಗೆ ಇಪಿಐ (ಎಲ್ಲರೂ ಮುಖ್ಯ) ಎಂದು ಹೇಳಿದ್ದನ್ನು ಇಲ್ಲಿ ಉಲ್ಲೇಖಿಸುವುದು ಸೂಕ್ತವಾಗಿದೆ. ಇಪಿಐ ಅಂದರೆ ಎವೆರಿ ಪರ್ಸನ್​ ಹ್ಯಾಸ್​ ವ್ಯಾಲ್ಯೂ ಆ್ಯಂಡ್​ ಇಂಪಾರ್ಟೆನ್ಸ್​ (ಪ್ರತಿಯೊಬ್ಬ ವ್ಯಕ್ತಿಗೂ ಮೌಲ್ಯ ಮತ್ತು ಪ್ರಾಮುಖ್ಯತೆ ಇರುತ್ತದೆ). ಪ್ರಧಾನಿ ಅವರು ಅಂದು ಹೇಳಿದ ಮಾತನ್ನು ಪಾಲಿಸುತ್ತಲೇ ಬರುತ್ತಿದ್ದು, ಇತರರಿಗೂ ಮಾದರಿಯಾಗಿದ್ದಾರೆ.

    ವಿಐಪಿ ಸಂಸ್ಕೃತಿಯ ಸಂಕೇತವಾದ ವಾಹನಗಳ ಮೇಲಿನ ಕೆಂಪು ದೀಪಗಳ ಬಳಕೆಯನ್ನು ಸಹ ಪ್ರಧಾನಿ ಮೋದಿ ಕೊನೆಗೊಳಿಸಿದ್ದಾರೆ. (ಏಜೆನ್ಸೀಸ್​)

    ನಟ ವಿಶಾಲ್​ ಮನೆಯ ಮೇಲೆ ಕಲ್ಲು ತೂರಾಟ: ದಾಳಿ ಹಿಂದಿನ ಕಾರಣ ಬಿಚ್ಚಿಟ್ಟ ನಾಲ್ವರು ಆರೋಪಿಗಳು

    ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯ ವಿಜೇತ ತಂಡಕ್ಕೆ ಸಿಗಲಿದೆ 13 ಕೋಟಿ ರೂ. ಬಹುಮಾನ

    ಹಾಸನದಲ್ಲಿ ಇಸ್ಪೀಟ್​ ಅಡ್ಡೆ ಮೇಲೆ ದಾಳಿ: ಠಾಣೆಗೆ ನುಗ್ಗಿ ಮಹಿಳಾ ಪಿಎಸ್​ಐ ಮೇಲೆ ಹಲ್ಲೆಗೆ ಯತ್ನಿಸಿದ ಗ್ರಾಪಂ ಸದಸ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts