ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ ಎಂದು ಹೇಳಲಾಗುತ್ತಿದೆ.
ಆರೋಪಿಯು ಬೆಳ್ಳಾರೆಯ ಬೂಡು ಪ್ರದೇಶದ ನಿವಾಸಿಯಾಗಿದ್ದು, ವಿಚಾರಣೆ ವೇಳೆ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿರುವುದಾಗಿ ದಿಗ್ವಿಜಯ ನ್ಯೂಸ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನೆ ಹಿನ್ನೆಲೆ ಏನು?
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್)
ಹಂತಕರಿಂದ ಪ್ರವೀಣ್ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ
ದಾಳಿ ಮಾಡಿದಷ್ಟು ದುಡ್ಡಿನ ರಾಶಿ! ನಟಿ ಅರ್ಪಿತಾಳ ಮತ್ತೊಂದು ಫ್ಲ್ಯಾಟ್ನಲ್ಲಿ 20 ಕೋಟಿ ನಗದು, 3 ಕೆಜಿ ಚಿನ್ನ ಪತ್ತೆ
ಒಂದು ಚಪಾತಿ ಕೊಟ್ಟ ಮೇಲೂ ಇನ್ನೊಂದು ಕೇಳಿದ, ಕೊಡದಿದ್ದಕ್ಕೆ ನಡೆಯಿತು ಭೀಕರ ಹತ್ಯೆ!