ಮಂಗಳೂರು: ಬೆಳ್ಳಾರೆ ಮೂಲದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಸಂಬಂಧ ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಬಂಧಿತ ಪ್ರಮುಖ ಮೂವರು ಆರೋಪಿಗಳು ಕೂಡ ಸ್ಥಳಿಯರೇ ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ಸಂಚು ರೂಪಿಸಿ ಪ್ರವೀಣ್ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್ನನ್ನು ಆಗಸ್ಟ್ 9ರಂದು ಬಂಧಿಸಲಾಗಿದೆ. ತನ್ನ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಸದ್ಯ ಪ್ರಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಇನ್ನುಷ್ಟು ಮಾಹಿತಿ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್ಪಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸಿಗಲಿದೆ. ಎ.ಡಿ.ಜಿ.ಪಿ ಅಲೋಕ್ ಕುಮಾರ್ ಸಹ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, ಸುದ್ದಿಗೋಷ್ಠಿಯಲ್ಲಿ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಹಿನ್ನೆಲೆ ಏನು?
ಜುಲೈ 26ರಂದು ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ರನ್ನು ಬರ್ಬರವಾಗಿ ಕೊಲೆ ಮಾಡಲಾಯಿತು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್)
ಹುಡುಗಿಯರು ಲೈಂಗಿಕ ಸುಖ ಬಯಸಿದರೆ… ಶಕ್ತಿಮಾನ್ ಖ್ಯಾತಿಯ ಮುಕೇಶ್ ಖನ್ನಾ ಹೇಳಿಕೆಗೆ ಭಾರಿ ಆಕ್ರೋಶ!
VIDEO| ಟಾಲಿವುಡ್ ಐಟಂ ಸಾಂಗ್ಗೆ ಬೋಲ್ಡ್ ಆಗಿ ಸೊಂಟ ಬಳುಕಿಸಿದ ಚಾಹಲ್ ಪತ್ನಿ ಧನಶ್ರೀ: ವಿಡಿಯೋ ವೈರಲ್
ಶೋಕಿಗಾಗಿ ಬೈಕ್ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ