More

    ದಿಯಾ ಸಿನಿಮಾ ಖ್ಯಾತಿಯ ಯುವನಟ ಪೃಥ್ವಿ ಅಂಬಾರ್​ಗೆ ಮಾತೃ ವಿಯೋಗ

    ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ಯುವ ನಟ ಹಾಗೂ ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬಾರ್​ ಅವರಿಗೆ ಮಾತೃ ವಿಯೋಗವಾಗಿದೆ.

    ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಜಾತ ವೀರಪ್ಪ ಅಂಬಾರ್​ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ (ಜುಲೈ 15) ರಾತ್ರಿ ವಿಧಿವಶರಾಗಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ.

    ಸುಜಾತ ಅವರ ಪತಿ ವೀರಪ್ಪ ಅಂಬಾರ್​ ಸಂಘ ಪರಿವಾರದ ಹಿರಿಯ ಮುಖಂಡರಲ್ಲಿ ಒಬ್ಬರು. ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಸಾಮಾಜಿಕ ಸೇವೆಯಲ್ಲೂ ತೊಡಗಿಕೊಂಡಿದ್ದರು. ಇದೀಗ ಸುಜಾತ ಅವರನ್ನು ಕಳೆದುಕೊಂಡ ಪೃಥ್ವಿ ಅಂಬರ್​ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

    ದಿಯಾ ಸಿನಿಮಾ ಮೂಲಕ ಭರವಸೆಯ ನಾಯಕ ನಟನಾಗಿ ಪೃಥ್ವಿ ಅಂಬಾರ್​ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ಬೈರಾಗಿ ಮತ್ತು ಶುಗರ್​ಲೆಸ್​ ಸಿನಿಮಾ ಬಿಡುಗಡೆಯಾಗಿದೆ. ಸಾಲು ಸಾಲು ಚಿತ್ರಗಳಲ್ಲಿ ಪೃಥ್ವಿ ನಟಿಸುತ್ತಿದ್ದಾರೆ. ಇದೀಗ ತಾಯಿಯನ್ನು ಕಳೆದುಕೊಂಡಿರುವ ಪೃಥ್ವಿ ಅಂಬಾರ್​ ದುಃಖ ಸಾಗರದಲ್ಲಿ ಮುಳುಗಿದ್ದಾರೆ.

    ಜನಾಕ್ರೋಶಕ್ಕೆ ಮಣಿದ ಸರ್ಕಾರ: ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವಿಡಿಯೋ ಶೂಟಿಂಗ್​ ಬ್ಯಾನ್​ ಆದೇಶ ವಾಪಸ್​

    ನಟ ರಾಘವ ಲಾರೆನ್ಸ್​ ತಲೈವಾ​​ ರಜಿನಿಕಾಂತ್​ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…

    ಕಾರುಗಳ ಕಳ್ಳಸಂಚಾರ, ಅಪಘಾತ ವಿಮೆ ಕ್ಲೇಮ್​​ಗೂ ಅಡ್ಡದಾರಿ: ವೈಟ್​ಬೋರ್ಡ್ ವಾಹನ ಟ್ಯಾಕ್ಸಿಯಾಗಿ ಬಳಕೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts