ಹೈದರಾಬಾದ್: ಮೇರು ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗಕ್ಕೆ ಬಹು ದೊಡ್ಡ ಆಘಾತ ನೀಡಿದೆ. ಪುನೀತ್ರನ್ನು ಪ್ರೀತಿಸುತ್ತಿದ್ದ ಅಭಿಮಾನಿಗಳಿಗೆ ಅಪ್ಪು ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಲಾವಿದರಿಗೂ ಅಪ್ಪು ನೆನಪು ತುಂಬಾ ಕಾಡುತ್ತಿದೆ.
ತಮಿಳು ನಟ ವಿಶಾಲ್ ಅವರು ಪುನೀತ್ ನೋಡಿಕೊಳ್ಳುತ್ತಿದ್ದ 1800 ಮಕ್ಕಳ ಶಿಕ್ಷಣವನ್ನು ಒಂದು ವರ್ಷಗಳ ಕಾಲ ತಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದಾರೆ. ವಿಶಾಲ್ ನಿರ್ಧಾರವನ್ನು ಇಡೀ ಚಿತ್ರರಂಗ ಸ್ವಾಗತಿಸಿದೆ. ಇದೀಗ ಅಪ್ಪು ನೆನಪಲ್ಲಿ ನಟಿ ಪ್ರಣೀತಾ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ. ತಮ್ಮ ಪ್ರಣೀತಾ ಫೌಂಡೇಶನ್ ಮೂಲಕ ಒಳ್ಳೆಯ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ಅಪ್ಪುಗೆ ಗೌರವ ಪೂರ್ವಕವಾಗಿ ಬೆಂಗಳೂರಿನಲ್ಲಿ ಒಂದು ದಿನ ಮೆಡಿಕಲ್ ಕ್ಯಾಂಪ್ ಇಡುವುದಾಗಿ ಪ್ರಣೀತಾ ಘೋಷಿಸಿದ್ದು, ಎಲ್ಲರೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಮೆಡಿಕಲ್ ಕ್ಯಾಂಪ್ ನವೆಂಬರ್ 3ರಂದು ಅಬೇಂಡ್ಕರ್ ಭವನದಲ್ಲಿ ನಡೆಯಲಿದೆ. ಸಾಕಷ್ಟು ಸಮಾಜಮುಖಿ ಕೆಲಸ ಮಾಡಿರುವ ಪುನೀತ್ಗೆ ಗೌರವ ಸೂಚಿಸುವ ಉದ್ದೇಶದಿಂದ ಪ್ರಣೀತಾ ಈ ಕಾರ್ಯ ಮಾಡುತ್ತಿದ್ದಾರೆ. (ಏಜೆನ್ಸೀಸ್)
ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ ಮಾಡಿದ್ದ ಕಿಡಿಗೇಡಿಯ ಬಂಧನ: ಕೀಳು ಮನಸ್ಥಿತಿಗೆ ಬೆಲೆ ತೆರಲೇಬೇಕು
ಜೇಮ್ಸ್ಗೆ ಯಾವುದೇ ಸಮಸ್ಯೆ ಇಲ್ಲ; ಚಿತ್ರ ಬಿಡುಗಡೆ ಖಂಡಿತಾ ಎನ್ನುತ್ತಾರೆ ಚೇತನ್
ಹುಬ್ಬೇರಿಸುವಂತಿದೆ ಸಲಿಂಗಕಾಮಿ ಜೋಡಿ ಮದುವೆ ಕುರಿತು ಸಮಂತಾ ಮಾಡಿರುವ ಪೋಸ್ಟ್..!