ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಅಸಂಖ್ಯಾತ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ರಾಜ್ಯವೇ ನೆಚ್ಚಿನ ನಟನ ಸಾವಿಗೆ ಕಂಬನಿ ಮಿಡಿಯುತ್ತಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಜಿಮ್ ಮಾಡುವಾಗ ಹೃದಯಾಘಾತ ಆಯಿತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಸ್ಥಿತಿ ಗಂಭೀರವಾದ ಬಳಿಕ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಸಂಖ್ಯಾತ ಅಭಿಮಾನಿಗಳ ಕೋರಿಕೆ ಕೊನೆಗೂ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಪುನೀತ್ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಏರ್ಪಡಿಸಲಾಗಿದ್ದು, ಈಗಾಗಲೇ ಆಸ್ಪತ್ರೆಯಲ್ಲಿ ರಾಜ್ ಕುಟುಂಬ ಬೀಡು ಬಿಟ್ಟಿದೆ. ಇತ್ತ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ.
ಪುನೀತ್ ಇಂದು ಬೆಳಗ್ಗೆ ಗಾಜನೂರಿಗೆ ತೆರಳುವುದಾಗಿ ಪುನೀತ್ ತಿಳಿಸಿದ್ದರು. ಅದರ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಮನೆಯಲ್ಲಿ ವರ್ಕೌಟ್ ಮುಗಿಸಿದ ಬಳಿಕ ಗಾಜನೂರಿಗೆ ಪಯಣ ಬೆಳೆಸಬೇಕಿತ್ತು. ಆದರೆ, ಅಷ್ಟರಲ್ಲೇ ಪುನೀತ್ಗೆ ಹೃದಯಾಘಾತವಾಗಿದ್ದು, ಇದೀಗ ಎಲ್ಲರನ್ನು ಬಿಟ್ಟು ದೂರದ ಊರಿಗೆ ಪುನೀತ್ ತೆರಳಿದ್ದು, ಇಡೀ ರಾಜ್ಯವೇ ಕಣ್ಣೀರ ಸಾಗರದಲ್ಲಿ ಮುಳುಗಿದೆ.
ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್ ರಾಜ್ಕುಮಾರ್: ಈ ಫೋಟೋ ನೋಡಿದ್ರೆ ಕಣ್ಣೀರು ಬರುತ್ತೆ
ಪುನೀತ್ ಆರೋಗ್ಯ ಸ್ಥಿತಿ ಗಂಭೀರ: ‘ಭಜರಂಗಿ 2’ ಸಿನಿಮಾ ಪ್ರದರ್ಶನ ರದ್ದು