ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದಾರೆ.
ಪ್ರಸ್ತುತ ಮಾಹಿತಿ ಪ್ರಕಾರ ಪುನೀತ್ ಪುತ್ರಿ ದೃತಿ ಈಗಾಗಲೇ ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೃತಿ ದೆಹಲಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಮಧ್ಯಾಹ್ನ 1.30ಕ್ಕೆ ದೃತಿ ಏರ್ ಇಂಡಿಯಾ ವಿಮಾನ ಹತ್ತಲಿದ್ದಾರೆ.
ಏರ್ ಇಂಡಿಯಾ 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆ ಬಂದಿಳಿಯಲಿದ್ದಾರೆ. ಬಳಿಕ ವಿಮಾನ ನಿಲ್ದಾಣದಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳಲಿದ್ದಾರೆ ಎಂಬ ಮಾಹಿತಿ ಇದೆ.
ಪ್ರಸ್ತುತ ಪುನೀತ್ ರಾಜ್ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ಮೂರ ಗಂಟೆಗೆ ಪುನೀತ್ ಅವರ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಮೆರವಣಿಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.
ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಚಾರ ಮಾರ್ಗದಲ್ಲಿ ಈ ರೀತಿ ಬದಲಾವಣೆ ಮಾಡಿಕೊಳ್ಳಲಾಗಿದೆ.
1. ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ, ನಾಗರಬಾವಿ ಮತ್ತು ಸುಮನಹಳ್ಳಿ ಜಂಕ್ಷನ್ನಲ್ಲಿ ಬದಲಾಯಿಸಲಾಗಿದೆ.
2. ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು ಮತ್ತು ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್ನಲ್ಲಿ ಮಾರ್ಗ ಬದಲಾಯಿಸಲಾಗಿದೆ.
3. ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್ ಕ್ರಾಸ್ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ ಬದಲಾಯಿಸಲಾಗಿದೆ.
4. ಮಹಾಲಕ್ಷ್ಮಿ ಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.
ನಾಳೆಯಲ್ಲ ಇಂದು ಸಂಜೆಯೇ ಅಂತ್ಯಕ್ರಿಯೆ: ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ ಸಿಎಂ ಬೊಮ್ಮಾಯಿ
ಇದೆಂಥಾ ದುರ್ವಿಧಿ: ಅಪ್ಪು ವ್ಯಕ್ತಿತ್ವ ಸಾರುವ ಈ ಹಾಡಿನ ಸಾಲು ಅವರ ಅಕಾಲಿಕ ಮರಣವನ್ನೂ ನಿಜವಾಗಿಸಿ ಬಿಡ್ತು
ಪುನೀತ್ ಸಾವಿನ ಸುದ್ದಿ ಕೇಳಿದಾಗಿನಿಂದ ಟಿವಿ ಮುಂದೆ ಕೂತು ಕಣ್ಣೀರಾಕ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು