ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಅವಹೇಳನಕಾರಿ ಪೊಸ್ಟ್ ಮಾಡಿದ್ದ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ಸೋಮವಾರ (ನವೆಂಬರ್ 1) ಬಂಧಿಸಿದ್ದಾರೆ.
ರಾಜ್ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೀವು ನೆನಪಿನಲ್ಲೇ ಇಟ್ಟುಕೊಳ್ಳಿ ಮರೆಯಬೇಡಿ. ನಾವು ಎಣ್ಣೆ ಕುಡಿದು ಬಳಿಕ ಆತನ ಸಮಾಧಿ ಮೇಲೆ ಮೂ** ಮಾಡುತ್ತೇವೆ” ಎಂದು ಕಿಡಿಗೇಡಿಯೊಬ್ಬ ಕಾರಿನಲ್ಲಿ ಕುಳಿತು ಮದ್ಯದ ಬಾಟಲ್ ಕೈಯಲ್ಲಿ ಹಿಡಿದಿರುವ ಫೋಟೋವನ್ನು ಫೋಸ್ಟ್ ಮಾಡಿದ್ದ. ಈ ಫೋಟೋವನ್ನು ಸುದೀಪ್ ಪುತ್ರಿ ಸಾನ್ವಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಅಪ್ಲೋಡ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು. ‘ಜನರಿಗೆ ಮನುಷ್ಯತ್ವ ಇಲ್ಲವೇ? ಮದ್ಯಕ್ಕಾಗಿ ಪುನೀತ್ ಬಗ್ಗೆ ಇಂಥ ಮನಸ್ಥಿತಿಯೇ?’ ಎಂದು ಪ್ರಶ್ನಿಸಿರುವ ಸಾನ್ವಿ, ‘ಕರ್ನಾಟಕ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಂಡಿತ್ತು. ಬೆಂಗಳೂರಲ್ಲಿ ವಾಸವಿರುವ ಉತ್ತರ ಭಾರತದವರು ಸ್ವಲ್ಪವಾದರೂ ಪ್ರಜ್ಞಾವಂತಿಕೆ ತೋರಿ’ ಎಂದು ಛಾಟಿ ಬೀಸಿದ್ದರು.
ಕಿಡಿಗೇಡಿಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದರು. ಈ ವಿಚಾರ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆಯೇ ತನಿಖೆಗೆ ಇಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಖಚಿತಪಡಿಸಿದ್ದಾರೆ.
ಅ.29ರಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಅಪ್ಪು ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಮಂದಿ ಕಂಠೀರವ ಸ್ಟೇಡಿಯಂನತ್ತ ಧಾವಿಸುತ್ತಲೇ ಇದ್ದರು. ಅಪ್ಪು ಅಗಲಿಕೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಲ್ಲಿ ಭಾನುವಾರದವರೆಗೂ ಬಾರ್ ಮತ್ತು ಪಬ್ಗಳನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡಬೇಡಿ. ಪುನೀತ್ ಅವರನ್ನ ಅತ್ಯಂತ ಗೌರವಯುತವಾಗಿ, ಶಾಂತಿಯುತವಾಗಿ ಕಳುಹಿಸಿ ಕೊಡಲು ಸಹಕರಿಸಿ. ಅಪ್ಪು ಅಗಲಿಕೆ ನೋವಿನಲ್ಲಿ ಅಭಿಮಾನಿಗಳು ತಾಳ್ಮೆ, ಸ್ಥಿಮಿತ ಕಳೆದುಕೊಳ್ಳಬಾರದು. ಕುಡಿದ ಅಮಲಿನಲ್ಲಿ ಕೆಲ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾದರೆ ಕಷ್ಟ ಎಂದು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಬಾರ್ಗಳನ್ನ ಬಂದ್ ಮಾಡಿಸಿತ್ತು. ಈ ವೇಳೆ ಮದ್ಯಕ್ಕಾಗಿ ಪರದಾಡಿದ್ದ ಉತ್ತರ ಭಾರತ ಮೂಲದ ಕೆವರು ಕೀಳು ಮನಸ್ಥಿತಿ ಪ್ರದರ್ಶಿಸಿದ್ದಾರೆ. ಉತ್ತರ ಭಾರತದಿಂದ ಬಂದು ಬೆಂಗಳೂರಲ್ಲಿ ಉದ್ಯೋಗ ಮಾಡುತ್ತಿರುವ ಕೆಲವರು ಎಣ್ಣೆಗಾಗಿ ಅಲೆದಾಡಿದ್ದಾರೆ. ನಿಷೇಧದ ನಡುವೆ ಕೊನೆಗೂ ಬಿಯರ್ ಸಿಕ್ಕಿದೆ. ಬಳಿಕ ಕಾರಿನಲ್ಲಿ ಬಿಯರ್ ಬಾಟಲಿ ಹಿಡಿದು ಫೋಟೋ ಕ್ಲಿಕ್ಕಿಸಿ ಅದನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಅಷ್ಟೇ ಅಲ್ಲ ಫೋಟೋ ಜತೆಗೆ ಪುನಿತ್ ರಾಜ್ಕುಮಾರ್ ಬಗ್ಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದು, ಅದರ ಪರಿಣಾಮ ಇದೀಗ ಕಂಬಿ ಹಿಂದೆ ಬಿದ್ದಿದ್ದಾನೆ. (ದಿಗ್ವಿಜಯ ನ್ಯೂಸ್)
ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ: ಸುದೀಪ್ ಮಗಳು ಸಾನ್ವಿಯಿಂದ ಹಿಗ್ಗಾಮುಗ್ಗಾ ತರಾಟೆ
ಜೇಮ್ಸ್ಗೆ ಯಾವುದೇ ಸಮಸ್ಯೆ ಇಲ್ಲ; ಚಿತ್ರ ಬಿಡುಗಡೆ ಖಂಡಿತಾ ಎನ್ನುತ್ತಾರೆ ಚೇತನ್
ದೀಪಾವಳಿ ಚಿನ್ನ ಖರೀದಿ ಭರಾಟೆ: 2 ಸಾವಿರ ಕೋಟಿ ರೂಪಾಯಿ ವಹಿವಾಟು ನಿರೀಕ್ಷೆ; ಪ್ರತಿ ಗ್ರಾಂ ಮೇಲೆ 200 ರೂ. ಇಳಿಕೆ..
ದೀಪಾವಳಿ ಬಳಿಕ ಕೋವಿಡ್ ಉಲ್ಬಣ?; ನಿಯಮ ಪಾಲಿಸದಿದ್ದರೆ 3ನೇ ಅಲೆ ನಿಶ್ಚಿತ; ತಜ್ಞರಿಂದ ಗಂಭೀರ ಎಚ್ಚರಿಕೆ