ಹೈದರಾಬಾದ್: ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರ ಸಹಾಯಕ ನಿರ್ದೇಶಕ ಸಾಯಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನ ಮಾಧಪುರ್ ಪೊಲೀಸ್ ಠಾಣೆ ಬಳಿಯಿರುವ ದುರ್ಗಮ್ ಕರೆಗೆ ಹಾರಿ ಕೊನೆಯುಸಿರೆಳೆದಿದ್ದಾರೆ.
ಮೊದಲು ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಶವವನ್ನು ವಶಕ್ಕೆ ಪಡೆದು ಒಸ್ಮಾನಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ನಂತರ ನಡೆದ ತನಿಖೆಯ ವೇಳೆ ಮೃತಪಟ್ಟ ವ್ಯಕ್ತಿ ಸಾಯಿ ಕುಮಾರ್ ಎಂದು ತಿಳಿದುಬಂದಿದೆ.
ಸಾಯಿ ಕುಮಾರ್ ರಂಗಾರೆಡ್ಡಿ ಜಿಲ್ಲೆಯ ಸೆರಿಲಿಂಗಂಪಲ್ಲಿಯ ಕೊತಗುಡದ ನಿವಾಸಿ ಮತ್ತು ನಿರ್ದೇಶಕ ಪುರಿ ಜಗನ್ನಾಥ್ ಜೊತೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ. ಆರ್ಥಿಕ ಒತ್ತಡ ಎದುರಿಸಲಾಗದೇ ಕೆಲಸಕ್ಕಾಗಿ ಅಲೆದಾಡುತ್ತಿದ್ದ ಸಾಯಿ ಕುಮಾರ್ ಸಾವಿನ ಹಾದಿ ಹಿಡಿದಿದ್ದಾನೆಂದು ತಿಳಿದುಬಂದಿದೆ.
ಚಿತ್ರರಂಗದಲ್ಲಿ ಹೊಳೆಯುವುದೆಲ್ಲ ಚಿನ್ನವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಲೈಗರ್ ಸಿನಿಮಾ ಹೀನಾಯವಾಗಿ ಸೋತಿದ್ದರ ಪರಿಣಾಮ ಮುಂಬೈನ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉಳಿದುಕೊಂಡಿದ್ದ ಪುರಿ ಜಗನ್ನಾಥ್ ಇದೀಗ ಹೈದರಾಬಾದ್ಗೆ ಮರಳಿದ್ದಾರೆ. ತಮ್ಮ ಸಿಬ್ಬಂದಿಗೆ ಸಂಬಳ ನೀಡುವ ಸ್ಥಿತಿಯಲ್ಲಿಯೂ ಇಲ್ಲ ಎಂಬ ಸಂಗತಿ ಟಾಲಿವುಡ್ ಗಲ್ಲಿಯಲ್ಲಿ ಹರಿದಾಡುತ್ತಿದೆ. (ಏಜೆನ್ಸೀಸ್)
ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನದಿಯನ್ನು ದಾಟಿ ಪರೀಕ್ಷೆ ಬರೆದ ಯುವತಿ: ವಿಡಿಯೋ ವೈರಲ್
ಹಬ್ಬಕ್ಕೆಂದು ಊರಿಗೆ ಬಂದಿದ್ದ ಅಮ್ಮ-ಮಗಳು ದುರಂತ ಸಾವು: ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ನಟ ಪ್ರಭಾಸ್ ದೊಡ್ಡಪ್ಪ, ಟಾಲಿವುಡ್ ರೆಬೆಲ್ ಸ್ಟಾರ್ ಕೃಷ್ಣಂ ರಾಜು ವಿಧಿವಶ