ರಾಯಚೂರು: ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯನ್ನು ಅಮಾನತು ಮಾಡಲಾಗಿದೆ.
ರಾಯಚೂರಿನ ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅವರಿಂದ ದೇವದುರ್ಗ ತಾಲೂಕಿನ ಮಲ್ಲೇದೇವರಗುಡ್ಡ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜ್ ನಾಯಕ್ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಗ್ರಾ.ಪಂ ಅಧ್ಯಕ್ಷನ ಫೋರ್ಜರಿ ಸಹಿ ಮಾಡಿ ಲಕ್ಷಾಂತರ ರೂ. ಹಣ ಲಪಟಾಯಿಸಲು ಮುಂದಾದ ಆರೋಪದಡಿ ಅಮಾನತು ಮಾಡಲಾಗಿದೆ. ಮಲ್ಲೇದೇವರಗುಡ್ಡ ಗ್ರಾಮ ಪಂಚಾಯಿತಿಯ ಭ್ರಷ್ಟಾಚಾರದ ಬಗ್ಗೆ ಈ ಹಿಂದೆಯೇ ದಿಗ್ವಿಜಯ ನ್ಯೂಸ್ ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಪಿಡಿಒ ಅಮಾನತು ಆಗಿದೆ.
ಗ್ರಾ.ಪಂ ಅಧ್ಯಕ್ಷನಿಗೆ ಮಾಹಿತಿ ಇಲ್ಲದೆ ಹೆಚ್ಚುವರಿ ಕಾಮಗಾರಿಗೆ ಕ್ರಿಯಾಯೋಜನೆ ಮಾಡಲಾಗಿತ್ತು. ಹೆಚ್ಚುವರಿ ಕಾಮಗಾರಿಗೆ ಪಂಚಾಯತ್ ಸಿಬ್ಬಂದಿ ಸೇರಿ ಅಧ್ಯಕ್ಷರ ಸಹಿಯನ್ನು ಪಿಡಿಒ ನಕಲು ಮಾಡಿರುವ ಆರೋಪ ಕೇಳಿಬಂದಿತ್ತು. ಹೆಚ್ಚುವರಿ ಕಾಮಗಾರಿ ಹೆಸರಲ್ಲಿ ಲಕ್ಷಾಂತರ ಹಣ ಲಪಟಾಯಿಸುವ ಹುನ್ನಾರ ಮಾಡಲಾಗಿದೆ ಎಂದು ಸ್ವತಃ ಗ್ರಾ.ಪಂ ಅಧ್ಯಕ್ಷರೇ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಡಿಒ ಅಮಾನತು ಮಾಡಲಾಗಿದೆ. (ದಿಗ್ವಿಜಯ ನ್ಯೂಸ್)
ಮೂರನೇ ಅಲೆಗೆ ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಪತ್ರ; ಮೂಲಸೌಕರ್ಯ ಹೆಚ್ಚಳಕ್ಕೆ ಸೂಚನೆ