More

    ಖ್ಯಾತ ನಟಿ ಮೇಲೆ ದೌರ್ಜನ್ಯ​: ನಟ ದಿಲೀಪ್ ಮನೆಯಲ್ಲಿ ಸಿಕ್ಕಿದ್ದೇನು? ಕೇಸ್​ಗೆ ಟ್ವಿಸ್ಟ್​ ಕೊಟ್ಟ ನಿರ್ದೇಶಕನ ಹೇಳಿಕೆ

    ಕೊಚ್ಚಿ: ಖ್ಯಾತ ನಟಿಯ ಮೇಲಿನ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಅಪರಾಧ ವಿಭಾಗದ ಅಧಿಕಾರಿಗಳು ನಟ ದಿಲೀಪ್ ಅವರ​ ಮನೆಯ ಮೇಲೆ ದಾಳಿ ಮಾಡಿದ್ದು, ಸುಮಾರು 8 ಗಂಟೆಗಳ ಶೋಧ ಕಾರ್ಯ ಮುಗಿಸಿದ್ದಾರೆ.

    ಅಧಿಕಾರಿಗಳ ತಂಡವೊಂದು ಕೇರಳದ ಅಲುವಾದಲ್ಲಿರುವ ದಿಲೀಪ್​ ಅವರ ಮನೆಗೆ ನಿನ್ನೆ (ಜ.13) ಬೆಳಗ್ಗೆ 11.30ರ ಸುಮಾರಿಗೆ ದಾಳಿ ಮಾಡಿತು. ದಾಳಿಯ ವೇಳೆ ನಟ ದಿಲೀಪ್​ ಮನೆಯಲ್ಲಿದ್ದ ಒಂದು ಕಂಪ್ಯೂಟರ್​ ಹಾರ್ಡ್​ ಡಿಸ್ಕ್​ ಮತ್ತು ಮೊಬೈಲ್​ ಫೋನ್​ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ದಿಲೀಪ್ ಮತ್ತು ಅವರ ಸಹೋದರನ ಮನೆಗಳು ಮತ್ತು ಅವರ ನಿರ್ಮಾಣ ಸಂಸ್ಥೆಯ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲು ಅಧಿಕಾರಿಗಳ ಮೂರು ತಂಡಗಳನ್ನು ಕಳುಹಿಸಲಾಗಿತ್ತು. ಮೂರು ತಂಡಗಳೂ 8 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದೆ ಎಂದು ಅಪರಾಧ ವಿಭಾಗದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆರೋಪಿ ನಟ ಮತ್ತು ಆತನೊಂದಿಗೆ ನಿಕಟ ಸಂಪರ್ಕದಲ್ಲಿರುವವರ ನಡುವಿನ ಆರ್ಥಿಕ ವ್ಯವಹಾರವನ್ನು ಪರಿಶೀಲಿಸುವ ಸಲುವಾಗಿ ದಾಳಿಯ ವೇಳೆ ಬಿಲ್ಸ್​ ಮತ್ತು ಕೆಲ ಮಹತ್ವದ ದಾಖಲೆಗಳನ್ನು ಸಹ ವಶಕ್ಕೆ ಪಡೆಯಲಾಗಿದೆ.

    ಮೂಲಗಳ ಪ್ರಕಾರ, ನ್ಯಾಯಾಲಯದ ಆದೇಶದ ಮತ್ತು ನಿರ್ದೇಶಕ ಬಾಲಚಂದ್ರ ಕುಮಾರ್​ ಅವರು ಅಪರಾಧ ವಿಭಾಗಕ್ಕೆ ಹೇಳಿಕೆ ನೀಡಿದ ಆಧಾರದ ಮೇಲೆ ಈ ದಾಳಿಯನ್ನು ನಡೆಸಲಾಗಿದೆ.

    ಕ್ರೈಂ ಬ್ರಾಂಚ್‌ಗೆ ಹಾಜರಾದ ಬಳಿಕ ಮಾಧ್ಯಮದವರನ್ನು ಭೇಟಿ ಮಾಡಿದ ಬಾಲಚಂದ್ರ ಕುಮಾರ್, ತನಿಖಾಧಿಕಾರಿಗಳ ಮೇಲೆ ಹಲ್ಲೆಗೆ ಸಂಚು ರೂಪಿಸಿರುವ ಬಗ್ಗೆ ಹಲವು ಕಡೆ ಚರ್ಚೆ ನಡೆದಿದೆ ಎಂದು ಹೇಳಿಕೊಂಡಿದ್ದಾರೆ. ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ದಿಲೀಪ್ ವಿರುದ್ಧ ಇತ್ತೀಚೆಗೆ ಮಾಧ್ಯಮಗಳ ಮೂಲಕ ಹಲವು ಸ್ಫೋಟಕ ಸಂಗತಿಗಳನ್ನು ಕುಮಾರ್ ಬಹಿರಂಗಪಡಿಸಿದ್ದರು.

    ಸಾಕ್ಷಿಗಳ ಮೇಲೆ ದಿಲೀಪ್ ಪ್ರಭಾವ ಬೀರಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಡಿಜಿಟಲ್ ಸೇರಿದಂತೆ ಸಾಕ್ಷ್ಯಗಳಿವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೇ ಟಿವಿ ವಾಹಿನಿಯೊಂದು ಬಿಡುಗಡೆ ಮಾಡಿದ್ದ ದಿಲೀಪ್ ಅವರ ಆಡಿಯೋ ಕ್ಲಿಪ್ ಆಧರಿಸಿ ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಹೊಸ ಪ್ರಕರಣ ದಾಖಲಿಸಿದ್ದಾರೆ.

    ಮಂಗಳವಾರ, ಹೊಸ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜಂಟಿ ಮನವಿ ಸಲ್ಲಿಸಿದ ನಂತರ ಜನವರಿ 14 ರವರೆಗೆ ದಿಲೀಪ್, ಅವರ ಸಹೋದರ ಮತ್ತು ಸೋದರ ಮಾವನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

    ಅಂದಹಾಗೆ ದೌರ್ಜನ್ಯಕ್ಕೆ ಒಳಗಾದ ನಟಿ ಸಾಮಾನ್ಯ ನಟಿಯೇನಲ್ಲ. ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡದಲ್ಲಿ ಸಾಕಷ್ಟು ಸಿನಿಮಾ ಮಾಡಿರುವ ಬಹುಭಾಷಾ ನಟಿ. ಐದು ವರ್ಷಗಳ ಹಿಂದೆ ಶೂಟಿಂಗ್​ ಮುಗಿಸಿ ಕಾರಿನಲ್ಲಿ ಹಿಂದಿರುಗುವಾಗ ಕಿಡಿಗೇಡಿಗಳ ಗುಂಪೊಂದು ಅವರನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಹೇಳಲಾಗಿದೆ. ಇದೇ ಪ್ರಕರಣದಲ್ಲಿ ತದನಂತರದಲ್ಲಿ ಮಲಯಾಳಂ ನಟ ದಿಲೀಪ್​ರನ್ನು ಬಂಧಿಸಲಾಗಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದು, ಇದೀಗ ಈ ಪ್ರಕರಣದಲ್ಲಿ ಮತ್ತಷ್ಟು ಸ್ಫೋಟಕ ಸಂಗತಿಗಳು ಹೊರಬರುತ್ತಿವೆ. (ಏಜೆನ್ಸೀಸ್​)

    ಕೊನೆಗೂ ಮೌನ ಮುರಿದ ಭಾವನಾ: ಕೆಲ ವರ್ಷಗಳ ಹಿಂದೆ ನಡೆದ ಕರಾಳ ಘಟನೆಯ ಬಗ್ಗೆ ನಟಿ ಹೇಳಿದ್ದು ಹೀಗೆ

    ತಿರುಪತಿ ಏರ್​ಪೋರ್ಟ್​ಗೆ ನೀರು ನಿಲ್ಲಿಸಿದ ಶಾಸಕನ ಪುತ್ರ

    ಶಿಕ್ಷಣ ಇಲಾಖೆ ಸಿ ದರ್ಜೆ ನೌಕರರಿಗೆ ಕಾರ್ಯಕ್ಷಮತೆ ಪರೀಕ್ಷೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts