ಗ್ರಾಪಂ ಅಕ್ರಮಗಳ ವಿರುದ್ಧ ದೂರು ನೀಡಿದ RTI ಕಾರ್ಯಕರ್ತನ ಕೈಕಾಲು ಮುರಿದು ಮೊಳೆ ಹೊಡೆದ ದುಷ್ಕರ್ಮಿಗಳು

ಜೈಪುರ: ಭ್ರಷ್ಟಾಚಾರ ಮತ್ತು ಗ್ರಾಮ ಪಂಚಾಯಿತಿ ಏರಿಯಾದಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟದ ವಿರುದ್ಧ ದೂರು ನೀಡಿದ ಆರ್​ಟಿಐ ಕಾರ್ಯಕರ್ತ ಮೇಲೆ ನಿಷ್ಕರುಣೆಯಿಂದ ಹಲ್ಲೆ ಮಾಡಿರುವ ಘಟನೆ ಡಿ. 21ರಂದು ರಾಜಸ್ಥಾನದ ಬರ್ಮರ್​ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರ್ಯಕರ್ತ ಅಮ್ರಾರಾಮ್​ ಗೊದಾರ ಎಂಬುವರ ಮೇಲೆ ಕಬ್ಬಿಣದ ಸಲಾಕೆಯಿಂದ ಬಡಿದು ಕೈಕಾಲುಗಳನ್ನು ಮುರಿದಿದ್ದಾರೆ. ಅಲ್ಲದೆ, ಮೊಳೆಗಳಿಂದ ಕೈಕಾಲುಗಳ ಮೇಲೆ ಚುಚ್ಚಿ ಚಿತ್ರಹಿಂಸೆಯನ್ನು ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗೊದಾರ ಅವರನ್ನು ಜೋಧ್ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. … Continue reading ಗ್ರಾಪಂ ಅಕ್ರಮಗಳ ವಿರುದ್ಧ ದೂರು ನೀಡಿದ RTI ಕಾರ್ಯಕರ್ತನ ಕೈಕಾಲು ಮುರಿದು ಮೊಳೆ ಹೊಡೆದ ದುಷ್ಕರ್ಮಿಗಳು