ರಾಮನಗರ: ಮಕ್ಕಳನ್ನು ನಂಬಿ ಪಾಲಕರು ಕಾಲೇಜಿಗೆ ಕಳುಹಿಸಿದರೆ, ಕಾಲೇಜಿಗೆ ಚಕ್ಕರ್ ಹೊಡೆಯುವ ಹುಡುಗ-ಹುಡುಗಿಯರು ಪೊದೆ ಮರೆಯಲ್ಲಿ ಅಸಭ್ಯ ವರ್ತನೆ ತೊಡಗುತ್ತಿರುವ ದೃಶ್ಯ ರಾಮನಗರದ ಪಾರ್ಕ್ವೊಂದರಲ್ಲಿ ಕಂಡುಬಂದಿದ್ದು, ಇಡೀ ಪಾರ್ಕ್ ಅನೈತಿಕ ತಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಾಮನಗರದ ಗಾಂಧಿ ಪಾರ್ಕ್ ಜಿಲ್ಲಾ ಕೇಂದ್ರಕ್ಕೆ ಇರುವ ಏಕೈಕ ಉದ್ಯಾನವನವಾಗಿದೆ. ತಾಲೂಕು ಕಚೇರಿ ಹಾಗೈ ನ್ಯಾಯಾಲಯಕ್ಕೆ ಬರುವ ಜನರು ವಿಶ್ರಾಂತಿ ಪಡೆಯಲು ಇರುವ ಏಕೈಕ ತಾಣ. ಆದರೆ, ನಗರ ಸಭೆ ನಿರ್ಲಕ್ಷ್ಯದಿಂದ ಉದ್ಯಾನವನ ಅನಾಥವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಮಹಾತ್ಮ ಗಾಂಧಿ ಉದ್ಯಾನವನವು ರಾಮನಗರದ ಕೋರ್ಟ್ ಹಾಗೂ ತಾಲೂಕು ಕಚೇರಿ ಮಧ್ಯ ಭಾಗದಲ್ಲಿದೆ. ಆದರೆ, ನಗರಸಭೆ ಅಧಿಕಾರಿಗಳು ಪಾರ್ಕ್ ಇಲ್ಲವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದು, ಸೂಕ್ತ ನಿರ್ವಹಣೆಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದು, ಮಧ್ಯಾಹ್ನವಾದರೆ, ಪಡ್ಡೆಗಳ ಅನೈತಿಕ ತಾಣವಾಗಿ ಬದಲಾಗುತ್ತದೆ. ಸಂಜೆಯಾದರೆ, ಕುಡುಕರು ಕುಡಿದು ತೂರಾಡಿ, ಹೊರಳಾಡುವ ದೃಶ್ಯ ಕೂಡ ಸಾಮಾನ್ಯವಾಗಿದೆ.
ಪಾರ್ಕಿಗೆ ಬರುವ ಕಾಲೇಜು ವಿದ್ಯಾರ್ಥಿಗಳು ಅಸಭ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಆದರೆ, ಈ ಬಗ್ಗೆ ಯಾರು ಸಹ ಗಮನ ಹರಿಸುತ್ತಿಲ್ಲ. ಪಾಲಕರು ಕೂಡ ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಉದ್ಯಾನವನವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕಿದೆ ಎಂದು ನಗರಸಭೆಯನ್ನು ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಕಾಲೇಜ್ಗೆ ಚಕ್ಕರ್ ಹಾಕಿ ಪಾರ್ಕಿನ ಪೊದೆ ಮರೆಯಲ್ಲಿ ವಿದ್ಯಾರ್ಥಿಗಳ ಅಸಭ್ಯ ವರ್ತನೆ: ಸಾರ್ವಜನಿಕರ ಆಕ್ರೋಶ
ಸರ್ಕಾರಕ್ಕೆ ಮತ್ತೊಂದು ಸವಾಲು: 58 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ; ಡಿಸೆಂಬರ್ 27 ರಂದು ಮತದಾನ..
ಒಮಿಕ್ರಾನ್ ಸೋಂಕು ತಡೆಯಲು ನಿಯಮ ಕಟ್ಟುನಿಟ್ಟು; ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗಟಿವ್ ವರದಿ ಕಡ್ಡಾಯ..