ಕಾನ್ಸ್​ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ: ಮಾಜಿ ಸಚಿವರ ಕಿಡ್ನಾಪ್​ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದ್ದು, ಮಾಜಿ ಸಚಿವ ವರ್ತೂರು ಪ್ರಕಾಶ್​ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್​​​ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ. ಜೆ.ಬಿ.ನಗರ ಠಾಣಾ ವ್ಯಾಪ್ತಿಯ ಚಲ್ಲಘಟ್ಟ ಏರಿಯಾದ ರೌಡಿಶೀಟರ್​ ಲೋಹಿತ್ ಅಲಿಯಾಸ್​ ರೋಹಿತ್​ ಬಲಗಾಲಿಗೆ ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್​ ಗುಂಡಿಕ್ಕಿದ್ದಾರೆ. ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ರೋಹಿತ್​, ಕಾನ್ಸ್​ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ. … Continue reading ಕಾನ್ಸ್​ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ: ಮಾಜಿ ಸಚಿವರ ಕಿಡ್ನಾಪ್​ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು