ಕಿಯೆವ್/ಮಾಸ್ಕೋ: ಶಾಂತಿ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ರಷ್ಯಾ ಮತ್ತು ಯೂಕ್ರೇನ್ಗೆ ತಾಲಿಬಾನ್ ಸಲಹೆ ನೀಡಿದೆ. ಕೆಲ ತಿಂಗಳುಗಳ ಹಿಂದೆ ಹಿಂಸೆಯ ಮೂಲಕ ಆಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡ ತಾಲಿಬಾನಿಗಳು ಇದೀಗ ಶಾಂತಿ ಮಾತುಕತೆಯನ್ನು ಪ್ರತಿಪಾದಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
ತಾಲಿಬಾನಿಗಳ ಆಪ್ತರಾಗಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೊನ್ನೆಯಷ್ಟೇ ರಷ್ಯಾಗೆ ಮೊದಲ ಬಾರಿ ಭೇಟಿ ನೀಡಿದ್ದರು. ಈ ವೇಳೆ ಯುದ್ಧ ಪರಿಸ್ಥಿತಿಯನ್ನು ರೋಮಾಂಚನಕಾರಿ ಎಂದು ಬಣ್ಣಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದರೆ, ತಾಲಿಬಾನಿಗಳು ಶಾಂತಿ ಮಂತ್ರ ಆಯ್ದುಕೊಳ್ಳುವ ಸಲಹೆ ನೀಡುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ.
ಇಸ್ಲಾಮಿಕ್ ಎಮಿರೇಟ್ಸ್ ಆಫ್ಘಾನ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಶುಕ್ರವಾರ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರಷ್ಯಾ ಮತ್ತು ಯೂಕ್ರೇನ್ ಎರಡು ದೇಶಗಳು ಸಂಯಮ ಕಾಯ್ದುಕೊಳ್ಳುವಂತೆ ಕರೆ ನೀಡಿದೆ.
ಯೂಕ್ರೇನ್ನಲ್ಲಿನ ಪರಿಸ್ಥಿತಿಯನ್ನು ಅಫ್ಘಾನಿಸ್ತಾನ ತುಂಬಾ ಹತ್ತಿರದಿಂದ ಅವಲೋಕಿಸುತ್ತಿದ್ದು, ಅಲ್ಲಿನ ನಾಗರಿಕ ಸಾವು-ನೋವುಗಳಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ತನ್ನ ತಟಸ್ಥತೆಯ ವಿದೇಶಾಂಗ ನೀತಿಗೆ ಅನುಗುಣವಾಗಿ ಉಭಯ ರಾಷ್ಟ್ರಗಳು ತಮ್ಮ ಸಮಸ್ಯೆಗಳನ್ನು ಶಾಂತಿಯುತ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕೆಂದು ಕರೆ ಕೊಟ್ಟಿದೆ. (ಏಜೆನ್ಸೀಸ್)
ಕೇಳುವವರು ಕೇಳುತ್ತಾರೆ….ಪಾತ್ರಕ್ಕಾಗಿ ಪಲ್ಲಂಗದ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ನಟಿ ಸ್ನೇಹಾ ಶರ್ಮಾ!
ಬೆಂಗಳೂರಿನಲ್ಲಿ ಪಾದಚಾರಿ ಬಲಿ ಪಡೆದ ಟಿಪ್ಪರ್ ಲಾರಿ ಚಾಲಕನಿಗೆ ಕೋರ್ಟ್ ಕೊಟ್ಟ ಶಿಕ್ಷೆ ಹೀಗಿದೆ…
ರಷ್ಯಾ ಹಿಡಿತ, ಕದನವಿರಾಮ ಸನ್ನಿಹಿತ: ಹತಾಶ ಯೂಕ್ರೇನ್ನಿಂದ ಸಂಧಾನ ಸೂತ್ರ