ಹೈದರಾಬಾದ್: ಪ್ರಸ್ತುತ ಸಮಂತಾ ಮತ್ತು ನಾಗಚೈತನ್ಯ ಡಿವೋರ್ಸ್ ವಿಚಾರವೂ ಟಾಕ್ ಆಫ್ ದಿ ಟೌನ್ ಆಗಿದೆ. ಇಬ್ಬರ ವಿಚ್ಛೇದನವನ್ನು ಅಭಿಮಾನಿಗಳು ಈ ಕ್ಷಣದಲ್ಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ಅಭಿಮಾನಿಗಳ ಪಾಲಿಗೆ ಇಬ್ಬರದ್ದು ಸುಂದರ ಜೋಡಿಯಾಗಿತ್ತು. ಆದರೆ, ಇದೀಗ ಇಬ್ಬರು ಬೇರೆ ಆಗಿರುವುದು ನೋವು ತರಿಸಿದೆ.
ವಿಚ್ಛೇದನ ಘೋಷಣೆಯ ಬೆನ್ನಲ್ಲೇ ಸಮಂತಾ ಅವರು ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರಲ್ಲಿ. ಇನ್ಮುಂದೆ ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳಬೇಕು ಮತ್ತು ಸೋಮಾರಿತನದಿಂದ ಹೊರಬರಬೇಕೆಂದು ಹೇಳಿದ್ದರು. ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಹೆಚ್ಚು ಕಾರ್ಯನಿರತವಾಗಿರುತ್ತೇನೆಂದು ಸಮಂತಾ ಸಂದೇಶ ನೀಡಿದ್ದರು.
ಸಾಕಷ್ಟು ದಿನಗಳ ನಂತರ ಹಾಗೂ ಡಿವೋರ್ಸ್ ಘೋಷಣೆ ಬೆನ್ನಲ್ಲೇ ಸಮಂತಾ ಮೊದಲ ಬಾರಿಗೆ ಶೂಟಿಂಗ್ಗೆ ಆಗಮಿಸಿದ್ದಾರೆ. ಹೈದರಾಬಾದ್ನ ಮುಕರಂಜಾ ಜೂನಿಯರ್ ಕಾಲೇಜಿನಲ್ಲಿ ಶೂಟಿಂಗ್ ನಡೆದಿದೆ. ಮಂಬೈ ಮೂಲದ ನಿರ್ದೇಶಕ ವಿಶೇಷ್ ವರ್ಮಾ ನಿರ್ದೇಶನದ ಚಿತ್ರಕ್ಕೆ ಡಿವೋರ್ಸ್ ನೋವಿನ ನಡುವೆಯೂ ಬಣ್ಣದ ಹಚ್ಚಿರುವ ಸಮಂತಾ ತುಂಬಾ ಭಾವುಕರಾದ ಸನ್ನಿವೇಶ ಜರುಗಿತು.
ದೀರ್ಘ ಕಾಲದ ಶೂಟಿಂಗ್ ಗ್ಯಾಪ್ನಿಂದಾಗಿ ಏನೋ ಕಳೆದುಕೊಂಡಂತಾಗಿದ್ದ ಸಮಂತಾಗೆ ಇದೀಗ ಮತ್ತೆ ಶೂಟಿಂಗ್ ಆರಂಭವಾಗಿರುವುದು ತುಂಬಾ ಖುಷಿ ಕೊಟ್ಟಿದೆ. ಇನ್ನು ಸಿನಿಮಾ ಯೂನಿಟ್ ಹೇಳುವ ಪ್ರಕಾರ ತುಂಬಾ ದಿನಗಳ ಗ್ಯಾಪ್ ನಂತರ ಬಣ್ಣ ಹಚ್ಚಿದ ಸಮಂತಾ ತುಂಬಾ ಭಾವುಕರಾಗಿ ಕಣ್ಣೀರಾಕಿದರಂತೆ. ಸೆಟ್ನಲ್ಲೆ ಗಳಗಳನೇ ಅತ್ತರಂತೆ.
ಮನಸ್ಸಿನಲ್ಲಿ ನೋವಿದ್ದರು ಅದನ್ನು ಮರೆಮಾಚಿ ಕ್ಯಾಮೆರಾ ಮುಂದೆ ಅಚ್ಚುಕಟ್ಟಾಗಿ ನಟಿಸಿದರು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಕೆಲಸದ ಮೇಲಿನ ಸಮಂತಾ ಅರ್ಪಣಾ ಮನೋಭಾವವನ್ನು ಸಿನಿಮಾ ತಂಡ ತುಂಬು ಮನಸ್ಸಿನಿಂದ ಕೊಂಡಾಡಿದ್ದಾರೆ. ಸಮಂತಾ ಓರ್ವ ಪರಿಪೂರ್ಣ ನಟಿ ಎಂದು ಮೆಚ್ಚುಗೆ ವ್ಯಕ್ತಪಡಿದ್ದಾರೆ.
ಅ.2ರಂದು ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್ ಮಾಡುವ ಮೂಲಕ ಡಿವೋರ್ಸ್ ಅನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. “ಸಾಕಷ್ಟು ಸಮಾಲೋಚನೆಯ ಬಳಿಕವು ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಬೇರೆ ಬೇರೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ” ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ. ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್ ಆನ್ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.
ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ವಿಘ್ನೇಶ್ ಶಿವನ್ ನಿರ್ದೇಶನದ ಮತ್ತು ವಿಘ್ನೇಶ್ ಶಿವನ್ ರೌಡಿ ಪಿಕ್ಚರ್ಸ್ ಸಹಯೋಗದೊಂದಿಗೆ ಸೆವೆನ್ ಸ್ಕ್ರೀನ್ ಸ್ಟುಡಿಯೋದಿಂದ ಬಂಡವಾಳ ಹೂಡುತ್ತಿರುವ ತಮಿಳು ಸಿನಿಮಾ ಕಾತು ವಾಕುಲಾ ರಂಡು ಕಾದಲ್ ನಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಜೊತೆ ಸಮಂತಾ ನಟಿಸುತ್ತಿದ್ದಾರೆ. ಇದರೊಂದಿಗೆ ಗುಣಶೇಖರ್ ನಿರ್ದೇಶನದ ಶಾಕುಂತಲಂ ಸಿನಿಮಾದಲ್ಲಿ ಶಾಕುಂತಲೆಯಾಗಿ ಸಮಂತಾ ಬಣ್ಣ ಹಚ್ಚಿದ್ದು, ಶಾಕುಂತಲಂ ಚಿತ್ರದ ಚಿತ್ರೀಕರಣವನ್ನು ಸಮಂತಾ ಸಂಪೂರ್ಣ ಮುಗಿಸಿದ್ದಾರೆ. (ಏಜೆನ್ಸೀಸ್)
ಸಮಂತಾ ಡಿವೋರ್ಸ್ ಹಿಂದಿರುವ ವ್ಯಕ್ತಿ ಈತನೇನಾ? ಅನುಮಾನ ಹುಟ್ಟುಹಾಕಿದೆ ಈ ವೈರಲ್ ಫೋಟೋ..!
ಒಂದು ವರ್ಷದ ಹಿಂದೆ ಇದೇ ದಿನ ಸಮಂತಾ ಆಡಿದ್ದ ಮಾತು ಇಷ್ಟು ಬೇಗ ಸುಳ್ಳಾಗಿ ಹೋಯಿತಾ..?!
ಮಗಳ ಡಿವೋರ್ಸ್ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಸಮಂತಾ ತಂದೆ ಜೋಸೆಫ್ ಪ್ರಭು..!
ಮದುವೆಗೂ ಮುನ್ನವೇ ಒಪ್ಪಂದವೊಂದಕ್ಕೆ ಸಹಿ ಹಾಕಿ ತನ್ನ ಹಕ್ಕನ್ನು ಕಳೆದುಕೊಂಡರಾ ನಟಿ ಸಮಂತಾ?