ಹೈದರಾಬಾದ್: ಸಮಂತಾ ಮತ್ತು ನಾಗಚೈತನ್ಯ ಕಳೆದ ಅಕ್ಟೋಬರ್ 2 ರಂದು ದಿಢೀರನೇ ಡಿವೋರ್ಸ್ ಘೋಷಣೆ ಮಾಡಿದ್ದು, ಅವರ ಅಭಿಮಾನಿಗಳಿಗೆ ಬಹುದೊಡ್ಡ ಆಘಾತ ನೀಡಿದಂತಾಗಿದೆ. ಇನ್ನು ಕೂಡ ಅದರಿಂದ ಹೊರಬರಲಾಗದೇ ಇಬ್ಬರು ಮತ್ತೆ ಒಂದಾಗುತ್ತಾರಾ ಎಂದು ಎದುರು ನೋಡುತ್ತಿದ್ದಾರೆ. ಆದರೆ, ಇತ್ತೀಚೆಗೆ ಸಮಂತಾ ಮಾಡಿರುವ ಒಂದು ಕೆಲಸವನ್ನು ನೋಡಿ ಅಭಿಮಾನಿಗಳಲ್ಲಿ ಮತ್ತೆ ಆಸೆ ಚಿಗುರಿದೆ.
ಸಮಂತಾ ಮಾಡಿದ ಆ ಕೆಲಸ ಏನೆಂದರೆ, ತಮ್ಮ ಇನ್ಸ್ಟಾಗ್ರಾಂನಲ್ಲಿದ್ದ ಡಿವೋರ್ಸ್ ಘೋಷಣೆಯ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಇದರಿಂದ ಅಭಿಮಾನಿಗಳು ಅಚ್ಚರಿಗೆ ಒಳಗಾಗಿದ್ದು, ಸಮಂತಾ ಈ ರೀತಿ ಯಾಕೆ ಮಾಡಿದರೂ ಎಂದು ಯೋಚಿಸುತ್ತಿದ್ದಾರೆ. ಇಬ್ಬರು ಮತ್ತೆ ಒಂದಾಗುತ್ತಾರಾ? ಸಮಂತಾ ಮತ್ತೆ ಅಕ್ಕಿನೇನಿ ಕುಟುಂಬಕ್ಕೆ ಮರಳಲು ಯತ್ನಿಸುತ್ತಿದ್ದಾರಾ? ಎಂಬ ಚರ್ಚೆ ಆರಂಭವಾಗಿದೆ.
ಆದರೆ, ನಾಗಚೈತನ್ಯ ಇನ್ಸ್ಟಾಗ್ರಾಂ ಖಾತೆಯಲ್ಲಿ ಡಿವೋರ್ಸ್ ಪೋಸ್ಟ್ ಹಾಗೇ ಇದೆ. ಒಂದು ವೇಳೆ ಒಂದಾಗುವುದಾದರೆ, ನಾಗಚೈತನ್ಯ ಖಾತೆಯಲ್ಲೂ ಪೋಸ್ಟ್ ಡಿಲೀಟ್ ಆಗಬೇಕಿತ್ತು. ಆದರೆ, ಡಿಲೀಟ್ ಆಗದಿರುವುದು ಅಭಿಮಾನಿಗಳಿ ಮತ್ತೊಮ್ಮೆ ನಿರಾಸೆಯಾಗಿದೆ. ಇನ್ಸ್ಟಾಗ್ರಾಂನಲ್ಲಿ ಕಹಿ ನೆನಪುಗಳನ್ನು ಅಳಿಸುವ ಪ್ರಕ್ರಿಯೆಯಲ್ಲಿ ಡಿವೋರ್ಸ್ ಪೋಸ್ಟ್ ಕೂಡ ಡಿಲೀಟ್ ಆಗಿದೆ ಎಂದು ಹೇಳಲಾಗುತ್ತಿದೆ.
ಡಿವೋರ್ಸ್ ಆಗಿರುವ ತಾರಾದಂಪತಿ ಸದ್ಯ ತಮ್ಮ ಗಮನವನ್ನು ಸಂಪೂರ್ಣ ಸಿನಿಮಾ ಕಡೆ ಹರಿಸಿದ್ದಾರೆ. ನಾಗಚೈತನ್ಯ ಅಭಿನಯದ ಬಂಗಾರರಾಜು ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಬಾಕ್ಸ್ಆಫೀಸ್ನಲ್ಲಿ ಸದ್ದು ಮಾಡುತ್ತಿದೆ. ಇತ್ತ ಸಮಂತಾ ಕೂಡ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದಲ್ಲಿ ಮೊದಲ ಬಾರಿಗೆ ಐಟಂ ಡಾನ್ಸ್ನಲ್ಲಿ ಸಮಂತಾ ಸೊಂಟ ಬಳುಕಿಸಿದ್ದು, ಹಾಡು ಸಿಕ್ಕಾಪಟ್ಟೆ ಹಿಟ್ ಆಗಿದೆ. (ಏಜೆನ್ಸೀಸ್)
ಇನ್ಸ್ಟಾಗ್ರಾಂಗೆ ಎಂಟ್ರಿ ಕೊಟ್ಟ ಮೀರಾ ಜಾಸ್ಮಿನ್: ಮೊದಲ ದಿನದ ಫಾಲೋವರ್ಸ್ ಸಂಖ್ಯೆ ಕೇಳಿದ್ರೆ ಬೆರಗಾಗ್ತೀರಾ!
ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಹೊಂದುವ ಹಕ್ಕಿದೆ ಎಂದು ಹೇಳುವಂತಿಲ್ಲ: ದೆಹಲಿ ಹೈಕೋರ್ಟ್
ಕರ್ತವ್ಯ ಮರೆತು ಚಲಿಸುವ ಕಾರಿನಲ್ಲಿ ಕುಣಿದು ಕುಪ್ಪಳಿಸಿದ ಪೊಲೀಸ್ ಸಿಬ್ಬಂದಿಗೆ ಬಿಗ್ ಶಾಕ್..!