ರಾಮನಗರ: ಕಿರುತೆರೆ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮೇಕಪ್ ಮ್ಯಾನ್, ಪಿಎ ಮಹೇಶ್ನನ್ನ ಕುಂಬಳಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೌಜನ್ಯ ತಂದೆ ದೂರಿನನ್ವಯ ವಶಕ್ಕೆ ಪಡೆದಿರುವ ಪೊಲೀಸರು ಮಹೇಶ್ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸೌಜನ್ಯಾಳ ಪ್ರತಿ ಚಲನವಲನದ ಬಗ್ಗೆ ಮಹೇಶ್ಗೆ ಮಾಹಿತಿ ಇತ್ತು. ಆಕೆಯ ಕೆಲಸದ ವಿಚಾರ ಹಾಗೂ ಬ್ಯಾಂಕ್ ವ್ಯವಹಾರದ ಬಗ್ಗೆ ಮಹೇಶ್ಗೆ ಇಂಚಿಂಚು ತಿಳಿದಿತ್ತು ಎನ್ನಲಾಗಿದೆ.
ಸದ್ಯ ಮಹೇಶ್ನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕಿರುತೆರೆ ನಟ ವಿವೇಕ್ ಮೇಲೆಯೂ ಸೌಜನ್ಯ ತಂದೆ ಪ್ರಭು ಮಾದಪ್ಪ ದೂರು ನೀಡಿದ್ದು, ಆತನನ್ನು ಪೊಲೀಸರು ವಶಕ್ಕೆ ನಡೆಸಲಿದ್ದಾರೆ. ನಿನ್ನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್ ಅಪಾರ್ಟ್ಮೆಂಟ್ನಲ್ಲಿ ಸೌಜನ್ಯ ಶವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಮಗಳ ಸಾವಿನ ಸುದ್ದಿ ತಿಳಿದ ಬೆನ್ನಲ್ಲೇ ಸೌಜನ್ಯ ತಂದೆ ಪ್ರಭು ಮಾದಪ್ಪ ನಟ ವಿವೇಕ್ ಮತ್ತು ಪಿಎ ಮಹೇಶ್ ವಿರುದ್ಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಬೆದರಿಕೆ ಕರೆ ಬೆನ್ನಲ್ಲೇ ಸಾವಿನ ಸುದ್ದಿಯು ಬಂತು: ನಟಿಯ ತಂದೆಯ ದೂರಿನಲ್ಲಿ ಸ್ಪೋಟಕ ಮಾಹಿತಿ ಬಯಲು
ಮಗಳ ಸಾವಿಗೆ ಆ ನಟನೇ ಕಾರಣ: ಆತ್ಮಹತ್ಯೆ ಮಾಡಿಕೊಂಡ ನಟಿಯ ತಂದೆಯ ಆರೋಪ, ಪೊಲೀಸರಿಗೆ ದೂರು..
ಡೆತ್ನೋಟ್ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆ